ಡಿ.31ರಂದು ಕಾಂಗ್ರೆಸ್ ಪಕ್ಷದ ಶಕ್ತಿ ಅಭಿಯಾನಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ಚಾಲನೆ.

ಹೊಳಲ್ಕೆರೆ:

         ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಡಿ.31ರಂದು ಮಾಜಿ ಸಚಿವ ಹೆಚ್.ಆಂಜನೇಯ ಅವರ ನೇತೃತ್ವದಲ್ಲಿ ಚಾಲನೆ ಮಾಡಲಾಗುವುದು ಎಂದು ಕೆ.ಪಿ.ಸಿಸಿ ಪ್ರಧಾನ ಕಾರ್ಯದರ್ಶಿ ಹನುಮಲಿ ಷಣ್ಮುಖಪ್ಪ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

            ಸದಸ್ಯತ್ವ ಅಭಿಯಾನ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಆದೇಶದಂತೆ ಇಡೀ ದೇಶದ್ಯಾಂತ ಡಿ.31ರಂದು ಹೊಸದಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಈ ಪ್ರಕ್ರಿಯೇ ಆನ್ ಲೈನ್ ಮೂಲಕ ಸದಸ್ಯತ್ವವನ್ನು ಬಯಸುವವರು ತಮ್ಮ ಹೆಸರು ವಿಳಾಸವನ್ನು ಸಂಬಂಧಪಟ್ಟ ಪದಾಧಿಕಾರಿಗಳಿಗೆ ನೀಡಬೇಕೆಂದು ಸಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ಹನುಮಂತಪ್ಪ ಸ್ಪಷ್ಟಪಡಿಸಿದರು.

           ಡಿ.31ರಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಬಯಲು ರಂಗಮಂದಿರದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಾತ್ಯಾರಾಜನ್, ಮುಂತಾದವರು ಭಾಗವಹಿಸುವರು ಎಂದು ತಿಳಿಸಲಾಯಿತು.
ಕಾಂಗ್ರೆಸ್ ಮುಖಂಡರಾದ ಪಿ.ಹೆಚ್.ಮುರುಗೇಶ್, ಮೋಹನ್‍ನಾಗರಾಜ್, ಸೈಯದ್ ಸಜೀಲ್, ಬಿ.ಗಂಗಾಧರ, ಮಧುಪಾಲೇಗೌಡ, ಲೋಹಿತ್‍ಕುಮಾರ್, ಎಸ್.ಜೆ.ರಂಗಸ್ವಾಮಿ, ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap