ಬೆಂಗಳೂರು:
ವರುಣಾ ಕ್ಷೇತ್ರದಲ್ಲಿ ಮಾಜಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ, ರಾಹು, ಕೇತು, ಶನಿ ಎಲ್ಲ ಒಟ್ಟಾಗಿ ನನ್ನನ್ನು ಸೋಲಿಸಿಬಿಟ್ಟವು ಎಂದು ನೀಡಿದ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದು, ಶನಿ, ರಾಹು, ಕೇತು ಬೇರಾರು ಅಲ್ಲ. ಜೆಡಿಎಸ್ ನಾಯಕರು ಎಂದು ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರನ್ನು ಸಂಚು ಮಾಡಿ, ಜೆಡಿಎಸ್ನವರು ಸೋಲಿಸಿಬಿಟ್ಟರು. ಅವರಿಗೆ ಅಪಮಾನ ಮಾಡಿ, ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದಾಗ ಜಿಟಿಡಿ ಅವರನ್ನು ಯಾಕೆ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಬೇಕಿತ್ತು ಎನ್ನುವ ಮೂಲಕ ಯಡಿಯೂರಪ್ಪ ಅವರು ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿದ್ದಾರೆ. ಕಾಂಗ್ರೆಸ್ ನ ಕೆಲವು ಮುಖಂಡರು ಹಾಗೂ ಜೆಡಿಎಸ್ ಮುಖಂಡರ ಒಳ ಸಂಚಿನಿಂದ ಸಿದ್ದರಾಮಯ್ಯ ಅವರಿಗೆ ಸೋಲುಂಟಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿ ಅಧಿಕಾರಕ್ಕೆ ಬಂದಾಗ ಸಿದ್ದರಾಮಯ್ಯನನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಗುಡುಗುತ್ತಿದ್ದ ಯಡಿಯೂರಪ್ಪ ಅವರು, ಮೈತ್ರಿ ಸರ್ಕಾರ ರಚನೆಯಾದ ನಂತರದ ಮೊದಲನೇ ದಿನವೇ ಸಿದ್ದರಾಮಯ್ಯ ಪರ ಮೃದು ಧೋರಣೆ ತೋರಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಕೆಲವರ ಸಂಚಿನಿಂದಲೇ ನೀವು ಸೋಲುವಂತಾಯಿತು ಎಂದು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/BS-Yeddyurappa-hand.gif)