ಎಂ ಎನ್ ಕೋಟೆ :
ಗುಬ್ಬಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮನವರ ಅಧ್ಯಕ್ಷತೆಯಲ್ಲಿ ನಡೆಯಿತ್ತು.
ಪಿಡಿಓ ಕವಿತ ಮಾತನಾಡಿ ಗ್ರಾಮ ಸಭೆಯಲ್ಲಿ ಬಸವ ವಸತಿ ಯೋಜನೆಯಲ್ಲಿ 20 ಮನೆಗಳು ಬಂದಿದ್ದು ಆರ್ಹ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಮ್ಮ ಮಾತನಾಡಿ ಈಗಾಗಲೇ ಗ್ರಾಮ ಸಭೆಯಲ್ಲಿ ಫಲಾನುಭವಿಗಳು ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿಡಿಓ ಸ್ಥಳ ಪರಿಶೀಲನೆ ಮಾಡಿ ಬಡ ಕುಂಟುಂಬದ ಫಲಾನುಭವಿಗಳಿಗೆ ಮನೆಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದಕ್ಕೆ ರೈತರು ಸಹಕಾರ ನೀಡಬೇಕು ಎಂದರು. ಸಾಕಷ್ವು ಮನೆಗಳು ಗ್ರಾಮ ಪಂಚಾಯಿತಿಗೆ ಬರುತ್ತವೆ ರೈತರು ಮನೆಗಳನ್ನು ನಿರ್ಮಾಣ ಮಾಡಿಕೊಳಲು ಅವಕಾಶ ಇರುತ್ತದೆ.ಸರ್ಕಾರ ರೈತರಿಗೆ ಸಾಕಷ್ವು ಸೌಲಭ್ಯಗಳನ್ನು ಕೊಡುತ್ತಿದೆ. ರೈತರು ಸಮರ್ಪಕವಾಗಿ ಬಳಸಿಕೊಳುತ್ತಿಲ್ಲ ಉದ್ಯೋಗ ಖಾತರಿ ಯೋಜನೆಯಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಸಾಕಷ್ವು ಕೆಲಸಗಳನ್ನು ಮಾಡಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಉಮಾದೇವಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್ ಬಿ ರಾಜ್ ಕುಮಾರ್ , ಮುದ್ದಯ್ಯ , ವಿಜಿಯಮ್ಮ , ಪಾರ್ವತಮ್ಮ , ಗೀತಾ , ಸಿದ್ದಲಿಂಗಪ್ಪ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
