ಶಿವು ಉಪ್ಪಾರ ಸಾವಿನ ಪ್ರಕರಣ ಸಿಬಿಐಗೆ ವಹಿಸಿ

ದಾವಣಗೆರೆ:

      ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಗ್ರಾಮದಲ್ಲಿ ಇತ್ತೀಚೆಗೆ ಹಿಂದು ಕಾರ್ಯಕರ್ತ ಶಿವು ಉಪ್ಪಾರ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೆಕೆಂದು ಆಗ್ರಹಿಸಿ ಹಿಂದು ಜಾಗರಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

     ಇಲ್ಲಿನ ಜಯದೇವ ವೃತ್ತದಿಂದ ಎಸಿ ಕಚೇರಿಯ ವರೆಗೆ ಮೆರವಣಿಗೆ ನಡೆಸಿದ ಹಿಂಜಾವೇ ಕಾರ್ಯಕರ್ತರು, ಹಿಂದು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಉಪ ವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.

     ಈ ಸಂದರ್ಭದಲ್ಲಿ ಮಾತನಾಡಿದ ಹಿಂಜಾವೇ ಪ್ರಾಂತೀಯ ಕಾರ್ಯದರ್ಶಿ ಎಸ್.ಟಿ.ವೀರೇಶ್, ಗೋ ರಕ್ಷಣೆಗೆ ಹೋರಾಟ ಮಾಡುತ್ತಿದ್ದ ಹಾಗೂ ಹಿಂದು ಕಾರ್ಯಕರ್ತ ಶಿವು ಉಪ್ಪಾರ ಮೇ 25 ರಂದು ಮೃತಪಟ್ಟಿದ್ದು, ಈತನ ಸಾವು ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಸಂಶಯಗಳಿಗೆ ಮಾಡಿಕೊಟ್ಟಿದೆ ಎಂದು ಆರೋಪಿಸಿದರು.

      ಶಿವು ಉಪ್ಪಾರ ಹಿಂದೂ ಸಮಾಜಕ್ಕಾಗಿ ಹೋರಾಟ ಮಾಡುತ್ತಿದ್ದ. ಗೋ ರಕ್ಷಣೆಯ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದ. ಬೆಳಗಾವಿ ಜಿಲ್ಲೆಯಲ್ಲಿ ಹಿಂದೂಗಳ ಹೋರಾಟದಲ್ಲಿ ಪಾಲ್ಗೊಳ್ಳುತ್ತಾ, ಹಿಂದು ಸಮಾಜದ ಮೇಲೆಗುತ್ತಿದ್ದ ದೌರ್ಜನ್ಯ, ದಬ್ಬಾಳಿಕೆಯ ವಿರುದ್ಧ ಹೋರಾಡುತ್ತಿದ್ದ. ಈ ಕಾರಣಕ್ಕಾಗಿಯೇ ಧರ್ಮಾಂಧರ ವಿಧ್ವಂಸಕರ ಕೃತ್ಯಕ್ಕೆ ಬಲಿಯಾಗಿರುವ ಬಗ್ಗೆ ಅನುಮಾನಗಳಿವೆ ಎಂದು ದೂರಿದರು.
ರಾಜ್ಯ ಸರ್ಕಾರದ ಮುಸ್ಲಿಮರ ತುಷ್ಠೀಕರಣದ ನೀತಿಯಿಂದಾಗಿ, ಈಗಾಗಲೇ ಹಿಂದೂ ಧರ್ಮವು ಅನೇಕ ಕಾರ್ಯಕರ್ತರನ್ನು ಕಳೆದುಕೊಂಡಿದೆ

       ಆದರೂ ಸರ್ಕಾರ ಹಿಂದು ಕಾರ್ಯಕರ್ತರ ರಕ್ಷಣೆಗೆ ಮುಂದಾಗಿಲ್ಲ. ಹಿಂದೂ ಸಮಾಜದ ಬಗ್ಗೆ ಸರ್ಕಾರ ಹೊಂದಿರುವ ನಿರ್ಲಕ್ಷ್ಯತನ, ಕಿವುಡುತನ, ಬೇಜವಾಬ್ದಾರಿತನವನ್ನು ಹಿಂಜಾವೇ ತೀವ್ರವಾಗಿ ಖಂಡಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಗೋ ರಕ್ಷಕ ಶಿವು ಉಪ್ಪಾರ ಅವರು ಸಾವು ಹಲವು ಶಂಕೆಗಳನ್ನು ಹುಟ್ಟು ಹಾಕಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಇಲ್ಲವೇ, ನ್ಯಾಯಾಂಗ ತನಿಖೆ ನಡೆಸಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

      ಪ್ರತಿಭಟನೆಯಲ್ಲಿ ವೇದಿಕೆಯ ಸತೀಶ್ ಪೂಜಾರಿ, ಪಿ.ಸಿ.ಶ್ರೀನಿವಾಸ್, ಟಿಂಕರ್ ಮಂಜಣ್ಣ, ಸುರೇಂದ್ರ ಮೊಯ್ಲಿ, ಗೌತಮ್ ಜೈನ್, ಶಿವನಗೌಡ ಪಾಟೀಲ್, ಧನುಷ್ ರೆಡ್ಡಿ, ಮಲ್ಲಿಕಾರ್ಜುನ, ರಾಕೇಶ್ ಜಾಧವ್, ಚೇತನ್, ವಿಶ್ವನಾಥ, ಮಂಜುನಾಥ, ಗುರು ಸೋಗಿ, ವಿನಯ್, ಗುರುರಾಜ್, ಮಹೇಶ್ ರಾಯಚೂರು, ಮತ್ತಿತರರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link