ತುರುವೇಕೆರೆ:
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಬ್ಲಾಕ್ ಕಾಂಗ್ರೇಸ್ ಹಾಗೂ ಪಟ್ಟಣದ ಮುಸ್ಲಿಂ ಬಾಂದವರು ಬುಧವಾರ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಭಾರತದ ವೀರ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ ವೀರ ಮರಣವನ್ನಪ್ಪಿದ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದೈರ್ಯ ತುಂಬವಂತಹ ಕೆಲಸ ಮಾಡಬೇಕು ಎಂದರು.
ಎಐಸಿಸಿ ಸದಸ್ಯ ಸುಬ್ರಮಣಿಶ್ರೀಕಂಠೇಗೌಡ ಮಾತನಾಡಿ ಯೋಧರು ತಮ್ಮ ಜೀವವನ್ನು ಒತ್ತೆ ಇಟ್ಟು ದೇಶದ ಜನರನ್ನು ಕಾಪಾಡುತ್ತಿದ್ದು ಯೋದರಿಗೆ ನಮ್ಮ ಕೈಲಾದ ಸಹಾಯ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯ್ತಿ ಉಪಾಧ್ಯಕ್ಷ ನಂಜೇಗೌಡ, ಪಟ್ಟಣ ಪಂಚಾಯ್ತಿ ಸದಸ್ಯರಾದ ಯಜಮಾನ್ ಮಹೇಶ್, ಶಶಿಶೇಖರ್, ಶ್ರೀನಿವಾಸ್ ಮುಖಂಡರಾದ ಎನ್.ಆರ್.ಜಯರಾಮ್ ವಿಶ್ವೇಶ್ವರಯ್ಯ, ಪುಟ್ಟೆಗೌಡ, ದಾನಿಗೌಡ, ನಾಗೇಶ್, ನಂಜುಂಡಪ್ಪ, ಶಿವರಾಜು ಮುಸ್ಲಿಂ ಮುಖಂಡರು ಸೇರಿದಂತೆ ಇತರರು ಇದ್ದರು.