ಮುಂದಿನ ಮುಖ್ಯಮಂತ್ರಿ ನಾನೇ : ಸಂಚಲನ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು

    ಕಾಂಗ್ರೆಸ್ ನಿಂದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಬಿರುಗಾಳಿ ಎದ್ದಂತಿದೆ.ಉಪಚುನಾವಣೆಯ ಕಾವು ಏರಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತಕ್ಷೇತ್ರ ಬಾದಾಮಿಯಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದಿರುವುದು ಹಾಗೂ ಸಿದ್ದರಾಮಯ್ಯ ಆಪ್ತ ಶಾಸಕ ಜಮೀರ್ ಅಹ್ಮದ್,ಹೆಚ್.ಎಂ.ರೇವಣ್ಣ ಇದನ್ನು ಸಮರ್ಥಿಸಿ ಹೇಳಿಕೆಗಳನ್ನೂ ಸಹ ನೀಡುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಕಸಿವಿಸಿಯುಂಟು ಮಾಡಿದಂತಿದೆ.

    ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಜಮೀರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಈ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ. ಮುಖ್ಯಮಂತ್ರಿಗಳಾಗುವ ಬಗ್ಗೆ ತಮಗೆ ಗೊತ್ತಿಲ್ಲ. ಜಮೀರ್ ಹಾಗೂ ಸಿದ್ದರಾಮಯ್ಯ ಹೈಕಮಾಂಡ್‍ಗೆ ಇದನ್ನು ಹೇಳಿರಬಹುದೇನೋ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap