ಸಿದ್ದೇಶ್ವರ್-ಮಂಜಪ್ಪ ಮುಖಾಮುಖಿ

ದಾವಣಗೆರೆ:

     ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್ ನಾಮಪತ್ರ ಸಲ್ಲಿಸಿ ಹೊರಬರುವಾಗ, ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಮುಖಾಮುಖಿಯಾದರು.ನಾಮಪತ್ರ ಸಲ್ಲಿಸಿ ಹೊರ ಬಂದ ಜಿ.ಎಂ.ಸಿದ್ದೇಶ್ವರ್ ಅವರು ಶಾಮನೂರು ಶಿವಶಂಕರಪ್ಪ, ಎಸ್.ಎಸ್.ಮಲ್ಲಿಕಾರ್ಜುನ್ ಸೇರಿದಂತೆ ಎಲ್ಲರಿಗೂ ಲೋಕಾಭಿರಾಮವಾಗಿ ಕೈ ಮುಗಿಯುತ್ತಾ ಸಿದ್ದೇಶ್ವರ್ ಕೊಠಡಿಯಿಂದ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ ಸಹ ಕೈ ಮುಗಿದು ನಗೆ ಬೀರಿದರು.

      ನಾಮಪತ್ರ ಸಲ್ಲಿಸಿ ಹೊರಬಂದ ಸಿದ್ದೇಶ್ವರ್‍ಗೆ ಹಾಗೂ ತೆರೆದ ಜೀಪಿನಲ್ಲಿ ಬಂದ ಎಂ.ಪಿ.ರೇಣುಕಾಚಾರ್ಯರಿಗೆ ಅಡ್ಡಗಟ್ಟಿದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ‘ರಾಹುಲ್, ರಾಹುಲ್ ಎಂಬುದಾಗಿ ಕೂಗುವ ಮೂಲಕ ಛೇಡಿಸಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರೂ ಮೋದಿ… ಮೋದಿ… ಘೋಷಣೆ ಮೊಳಗಿಸಿದರು.ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಕಾಲ ಬಿಕ್ಕಟ್ಟಿನ ವಾತಾವರಣ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ಎಎಸ್ಪಿ ಟಿ.ಜೆ.ಉದೇಶ್ ಮತ್ತು ಇತರೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap