ಚಿತ್ರದುರ್ಗ;
ಚಿತ್ರದುರ್ಗದ ದೇವರಾಜ್ ಅರಸು ಶಿಕ್ಷಣ ಸಂಸ್ಥೆಯಡಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಎಸ್ಎಲ್ವಿ ಪಿಯು ಕಾಲೇಜಿಗೆ ಈ ಬಾರಿಯ ಪರೀಕ್ಷೆಯಲ್ಲಿ ಉತ್ತಮ ಪಲಿತಾಂಶ ಬಂದಿದೆ ಎಂದು ಸಂಸ್ಥೆಯ ಸಿಇಓ ರಘುಚಂದನ್ ತಿಳಿಸಿದ್ದಾರೆ.
ಈ ಪರೀಕ್ಷೆಯಲ್ಲಿ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ ಶೇ.96.34 ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.94.91ರಷ್ಟು ಫಲಿತಾಂಶ ಲಭಿಸಿದೆ. ಕಾಲೇಜಿನ ವಿದ್ಯಾರ್ಥಿ ನೇಹಾ ಯಾದವ್ ವಿಜ್ಞಾನ ವಿಭಾಗದಲ್ಲಿ ಶೇ.96.17 ಮತ್ತು ವಾಣಿಜ್ಯ ವಿಭಾಗದಲ್ಲಿ ರುದ್ರೇಶ್ ಎಂ.ಸಿ ಹಾಗೂ ಹೇಮಂತ್ ಎಂ.ಎಸ್. ಶೇ.95.67ರಷ್ಟು ಅಂಕಗಳಿಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಒಟ್ಟು 42 ಮಂದಿ ವಿದ್ಯಾರ್ಥಿಗಳು ಉತ್ತನ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 78 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 38 ಮಂದಿ ನಂತರದ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ
ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶಾಸಕ ಎಂ.ಚಂದ್ರಪ್ಪ, ಕಾರ್ಯದರ್ಶಿ ಚಂದ್ರಕಲಾ ಚಂದ್ರಪ್ಪ, ಸಂಸ್ಥೆಯ ಸಿಇಓ ರಘುಚಂದನ್ ಹಾಗೂ ಪ್ರಾಚಾರ್ಯರಾದ ಕೊಟ್ರೇಶ್ ಅವರು ಶ್ಲಾಘಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
