ದಾವಣಗೆರೆ:
ನಗರದ ಶಿವಯೋಗಿ ಮಂದಿರದಲ್ಲಿ ದಾವಣಗೆರೆ ಬಹುಜನ ಸಮಾಜ ಸೇವಾ ಸಂಘದ ವತಿಯಿಂದ ನಾಳೆ (ಏ.26ರಂದು) ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತ್ಯೋೀತ್ಸವದ ಪ್ರಯುಕ್ತ ಸರಳ ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಲಾಗಿದೆ ಎಂದು ಸಂಘದ ಮಹಾ ಪೋಷಕ ಡಾ.ಹೆಚ್.ವಿಶ್ವನಾಥ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮದ ಸಾನಿಧ್ಯವನ್ನು ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು, ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ, ಶ್ರೀಬಸವಪ್ರಭು ಸ್ವಾಮೀಜಿ, ಶ್ರೀಸರ್ದಾರ್ ಸೇವಾಲಾಲ್ ಸ್ವಾಮೀಜಿ ವಹಿಸುವರು. ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಉದ್ಘಾಟಿಸುವರು. ಮಾಜಿ ಶಾಸಕ ಹೆಚ್.ಎಸ್.ಶಿವಶಂಕರ್ ಅಂಬೇಡ್ಕರ್ ಹಾಗೂ ಬಾಬುಜಗಜೀವನರಾಂ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ಕುಲಪತಿ ಪ್ರೊ.ಎಸ್.ವಿ.ಹಲಸೆ ವಧು-ವರರಿಗೆ ಸಸಿ ವಿತರಿಸಲಿದ್ದಾರೆ. ಸಮಘದ ಅಧ್ಯಕ್ಷ ಎಂ.ಆಂಜನೇಯ ಅಧ್ಯಕ್ಷತೆ ವಹಿಸುವರು ಎಂದು ಮಾಹಿತಿ ನೀಡಿದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಜಿಲ್ಲಾ ಪಂಚಾಯತ್ ಸಿಇಒ ಹೆಚ್.ಬಸವರಾಜೇಂದ್ರ, ಪಾಲಿಕೆ ಆಯುಕ್ತ ವೀರೇಶ್ ಕುಂದುಗೋಳ, ಡೂಡಾ ಆಯುಕ್ತ ಆದಪ್ಪ, ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದಗಲ್, ಕಾರ್ಯಪಾಲಕ ಅಭಿಯಂತರ ಟಿ.ಎಸ್.ಮಲ್ಲಿಕಾರ್ಜುನ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶಿವಾನಂದ ಎಂ. ಕುಂಬಾರ್ ಭಾಗವಹಿಸಲಿದ್ದಾರೆಂದು ಹೇಳಿದರು.
ಸಂಘದ ಗೌರವಾಧ್ಯಕ್ಷ ಹೆಗ್ಗೆರೆ ರಂಗಪ್ಪ ಮಾತನಾಡಿ, ಇದೇ ಕಾರ್ಯಕ್ರಮದಲ್ಲಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎ.ಕೆ.ಹಂಪಣ್ಣ, ಪತ್ರಕರ್ತ ಸಿ.ವರದರಾಜ್ ಅವರಿಗೆ ವಿಶೇಷ ಅಭಿನಂದನೆ ನೀಡಿ ಗೌರವಿಸಲಾಗುವುದು. ಅಲ್ಲದೇ, ಉದ್ಯಮಿ ಮಲ್ಯಾಡಿ ಪ್ರಭಾಕರಶೆಟ್ಟಿ, ಡಾ.ಶಿವಕುಮಾರ್, ದೇವರಮನೆ ಶಿವಕುಮಾರ್, ಬಿ.ಎಸ್.ಪುರುಷೋತ್ತಮ, ಬಿ.ಎಂ.ಹನುಮಂತಪ್ಪ, ಎಸ್.ಟಿ. ಯೋಗೇಶ್ವರ , ಉಮೇಶ್, ಆನಂದ್, ಸತೀಶ್ ಅವರುಗಳಿಗೆ ಬಹುಜನ ಸಮಾಜ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಬಹುಜನ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ.ಆಂಜನೇಯ, ಟಿ.ರಂಗನಾಥ್, ಹೆಚ್.ಗುರುರಾಜ್, ಬಸವರಾಜ್, ಎಂ.ದುರುಗೇಶ್, ಕೆ.ಎಸ್.ಹನುಮಂತರಾಜ್, ರಾಕೇಶ್ ಎಸ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
