ಸರ್ಕಾರದಿಂದ ರಾಜ್ಯದ ಬಡವರಿಗೆ ಭರ್ಜರಿ ಕೊಡುಗೆ..!

ಬೆಂಗಳೂರು

     ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿದ್ದವರಿಗೆ ಸರ್ಕಾರ ಭರ್ಜರಿ ಗಿಫ್ಟ್‌ ನೀಡಲು ಮುಂದಾಗಿದೆ.

      ಮನೆ ಕಟ್ಟಿಕೊಂಡಿರುವ ಬಡವರ ಹೆಸರಿಗೆ ಸೈಟು ನೋಂದಣಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದ್ದಾರೆ.20/30, 30/40 ಅಳತೆಯಲ್ಲಿ ಕಟ್ಟಿರುವ ಮನೆಗಳ ಮಾಲೀಕರಿಗೆ ಹಕ್ಕುಪತ್ರ ನೀಡಲಾಗುತ್ತದೆ. ಸುಮಾರು 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗುವುದು ಎಂದು ತಿಳಿಸಿದ್ದಾರೆ

    ಮನೆಗಳನ್ನು ಆ ಜಾಗಗಳಲ್ಲಿ ಕಟ್ಟಿ 10 ವರ್ಷದಿಂದ 30 ವರ್ಷದ ಅವಧಿ ಆಗಿರಬೇಕು. ಎಸ್ ಸಿ, ಎಸ್ ಟಿ 5 ಸಾವಿರ ರೂಪಾಯಿ ಹಣ ಕಟ್ಟಬೇಕು, ಸಾಮಾನ್ಯ ವರ್ಗದವರಿಗೆ 10 ಸಾವಿರ ಹಣ ಕಟ್ಟಬೇಕು ಎಂದು ತಿಳಿಸಲಾಗಿದೆ .ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನವರಿ 28ರಂದು ನಡೆಯುವ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು.

 
    45,546 ಅರ್ಜಿಗಳನ್ನು ಇನ್ನೂ ಬಾಕಿ ಇವೆ, 20×30 ಅಳತೆಯ ಮನೆಗಳಿಗೆ ಹಕ್ಕುಪತ್ರ ಪಡೆಯಲು ಎಸ್ ಸಿ, ಎಸ್ ಟಿ ವರ್ಗಕ್ಕೆ 2500 ಸಾವಿರ ,ಸಾಮಾನ್ಯ ವರ್ಗಕ್ಕೆ 5 ಸಾವಿರ ,30/40ಅಳತೆಯ ಮನೆಗಳಿಗೆ ಹಕ್ಕುಪತ್ರ ಪಡೆಯಲು , ಎಸ್ ಸಿ, ಎಸ್ ಟಿ ವರ್ಗಕ್ಕೆ 5000 , ಸಾಮಾನ್ಯ ವರ್ಗಕ್ಕೆ 10000 ನೀಡಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link