ರಾಜ್ಯದ ಮನವಿ ತಿರಸ್ಕರಿಸಿದ ರಾಷ್ಟ್ರಪತಿ :ಕೃಷ್ಣಭೈರೇ ಗೌಡ

ಬೆಳಗಾವಿ

     ನ್ಯಾಯಾಲಯಗಳ ಕಲಾಪಗಳನ್ನು ಕನ್ನಡದಲ್ಲಿ ನಡೆಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ರಾಷ್ಟ್ರಪತಿ ಹಾಗೂ ಕೇಂದ್ರ ಗೃಹ ಇಲಾಖೆ ತಿರಸ್ಕರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕೃಷ್ಣಭೈರೇಗೌಡ ಇಂದು ವಿಧಾನಪರಿಷತ್‍ಗೆ ತಿಳಿಸಿದ್ದಾರೆ.

       ಪ್ರಶ್ನೋತ್ತರ ಕಲಾಪದ ವೇಳೆ ನಾಮನಿರ್ದೇಶನ ಸದಸ್ಯ ಯು.ಬಿ.ವೆಂಕಟೇಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೃಷ್ಣಭೈರೇಗೌಡ, ಪ್ರಾದೇಶಿಕ ಭಾಷೆಯಲ್ಲಿ ಕಲಾಪ ನಡೆಸುವ ಸಂಬಂಧ ಈ ಹಿಂದೆಯೇ ವಿಧಾನಮಂಡಲದ ಅಧಿವೇಶನದಲ್ಲಿ ನಿರ್ಣಯ ಮಂಡಿಸಿ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಇದೇ ರೀತಿ ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ 7 ರಾಜ್ಯಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು. ಆದರೆ ರಾಷ್ಟ್ರಪತಿ ಮತ್ತು ಕೇಂದ್ರ ಗೃಹ ಸಚಿವಾಲಯ ಈ ಪ್ರಸ್ತಾಪಗಳನ್ನು ತಿರಸ್ಕರಿಸಿವೆ ಎಂದರು.

        ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‍ಗಳ ಕಲಾಪ ಇಂಗ್ಲಿಷ್‍ನಲ್ಲಿ ನಡೆಯುತ್ತದೆ. ಕೆಲವು ಪ್ರಕರಣಗಳು ಬೇರೆ ರಾಜ್ಯಗಳಿಗೆ ವರ್ಗಾವಣೆಯಾಗುವುದರಿಂದ ಇಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಕಲಾಪ ನಡೆಸಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿಯವರು ಕಾರಣ ನೀಡಿದ್ದರು ಎಂದು ಕೃಷ್ಣಭೈರೇಗೌಡ ಸದನಕ್ಕೆ ಮಾಹಿತಿ ನೀಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link