ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ

ದಾವಣಗೆರೆ 

          ಡಿ.14 ರಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿರುವ ಪೋಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ದಾವಣಗೆರೆ ಮತ್ತು ಜಿಲ್ಲಾ ಪೋಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪೋಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆಯ ಬಗ್ಗೆ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

        ಕಾರ್ಯಕ್ರಮವನ್ನು ಪೊಲೀಸ್ ನಿರೀಕ್ಷಕರು ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಚ್.ಎನ್. ಕಿರಣ್‍ಕುಮಾರ್ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯದ ಬಗ್ಗೆ ಸ್ವಅರಿವು ಮುಖ್ಯವಾಗಿದೆ. ಪ್ರಸ್ತುತ ದಿನದಲ್ಲಿ ಎಲ್ಲರೂ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ಇದ್ದರೂ ಸಹ ಒತ್ತಡವನ್ನು ನಿಭಾಯಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯವಾಗಿದೆ. ಹಾಗೂ ಮಾನಸಿಕ ಅಸ್ವಸ್ಥರನ್ನು ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.

         ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ನೀಡಿದ ಮಾನಸಿಕ ಆರೋಗ್ಯ ಕಾರ್ಯಕ್ರಮದ ಜಿಲ್ಲಾ ಮನೋವೈದ್ಯ ಡಾ.ಗಂಗಂ ಸಿದ್ದಾರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿಗಳು ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಜೀವನದಲ್ಲಿ ಧನಾತ್ಮಕ ಒತ್ತಡವು ಸಾಧನೆಯನ್ನು ಮಾಡಲು ಪ್ರೇರಣೆ ನೀಡಲಿದೆ. ಆದರೆ ಋಣಾತ್ಮಕ ಒತ್ತಡವು ವಸ್ತುಗಳ ಹಿಮ್ಮುಖ ಬೆಳವಣಿಗೆಯ ಕಡೆಗೆ ತಳ್ಳುತ್ತದೆ. ಮತ್ತು ಶಾರೀರಿಕವಾಗಿ, ಮಾನಸಿಕವಾಗಿ ವ್ಯಕ್ತಿಗಳನ್ನು ರೋಗಗ್ರಸ್ತರನ್ನಾಗಿಸುತ್ತದೆ ಮನೋವೈದ್ಯಕೀಯವಾಗಿ ಕೆಲವು ತಂತ್ರಗಳನ್ನು ಅಳವಡಿಕೊಳ್ಳುವ ಮೂಲಕ ಈ ಋಣಾತ್ಮಕ ಒತ್ತಡಗಳಿಂದ ಹೊರಬರಲು ಸಹಾಯವಾಗುತ್ತದೆ. ಅವುಗಳೆಂದರೆ, ವ್ಯವಸ್ಥೆಗೆ ಅನುಗುಣವಾಗಿ ಹೊಂದಿಕೊಳ್ಳುವುದು, ಸಹಚರರೊಡನೆ ಮುಕ್ತವಾಗಿ ಸಂವಾದಿಸುವುದು, ಮನೋಭಾವನೆಯನ್ನು ಬದಲಾಯಿಸಿಕೊಳ್ಳುವುದು, ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳುವುದು ವಿಷಯಕ್ಕೆ ಸಂಬಂಧಿಸಿದಂತೆ ಯೋಜನೆಗಳನ್ನು ರೂಪಿಸಿಕೊಳ್ಳುವುದು, ಸ್ವ ಆರೋಗ್ಯಕ್ಕೆ ಒತ್ತನ್ನು ನೀಡುವುದು, ಹಾಗೂ ಧ್ಯಾನ, ಯೋಗ, ಮನೋರಂಜನಾತ್ಮಕ ಚಟುವಟಿಕೆಗಳು, ದೈಹಿಕ ಅಭ್ಯಾಸಗಳು ಇವುಗಳಿಂದ ಒತ್ತಡವನ್ನು ನಿವಾರಿಸಿಕೊಳ್ಳುವುದಾಗಿದೆ ಎಂದು ತಿಳಿಸಿದರು.

         ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಗಳಾದ ಡಾ.ಸರೋಜಬಾಯಿ ಜೆ.ಎಂ. ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾರ್ಯಕ್ರಮದ ವತಿಯಿಂದ ಜಿಲ್ಲಾದ್ಯಂತ ಎಲ್ಲಾ ಇಲಾಖೆವಾರು ಸಿಬ್ಬಂದಿಗಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಹಾಗೂ ಒತ್ತಡ ನಿರ್ವಹಣೆ ಕುರಿತು ಕಾರ್ಯಗಾರ ಮತ್ತು ತರಬೇತಿಯನ್ನು ಹಮ್ಮಿಕೊಳ್ಳುತ್ತಿದ್ದು ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಹಾಗೂ ಪ್ರತಿಯೊಬ್ಬರಿಗೂ ಸಹ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮುಖ್ಯವಾಗಿದೆ ಎಂದು ತಿಳಿಸಿದರು.

         ದಾವಣಗೆರೆಯ ವೃತ್ತ ನಿರೀಕ್ಷಕರಾದ ಉಮೇಶ್, ಹರಿಹರದ ವೃತ್ತ ನಿರೀಕ್ಷಕರಾದ ಗುರುನಾಥ್, ಹಾಗೂ ಸಿ.ಪಿ.ಐ., ಸಿ.ಐ.ಎನ್., ದೇವರಾಜ್ ದಾವಣಗೆರೆ, ಮನೋಶಾಸ್ತ್ರಜ್ಞರಾದ ಎಸ್. ವಿಜಯಕುಮಾರ್, ಸೈಕ್ಯಾಟ್ರಿಕ್ ಸೋಷಿಯಲ್ ವರ್ಕರ್ ಸಂತೋಷ್‍ಕುಮಾರ್ ಎಂ., ಹಾಗೂ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿಗಳಾದ ಅಂಜಿನಮ್ಮ ಬಿ., ಗಿರೀಶ್‍ನಾಯ್ಕ್ ಎಸ್.ವೈ., ಮಲ್ಲೇಶ್, ಶ್ರೀಧರ್ ಉಪಸ್ಥಿತಿರಿದ್ದರೆಂದು ಡಿಎಲ್‍ಓ ಸರೋಜಾಬಾಯಿ ಪ್ರಕಟಣೆ ತಿಳಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link