ಧಾರವಾಡ:
ಇಡಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ ಜೋರಾಗಿದ್ದ ಸಂದರ್ಭದಲ್ಲಿ ಸಂಭ್ರಮಾಚರಣೆಗಾಗಿ ತೆರಳುತ್ತಿದ್ದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ನಗರದ ವಾಟರ್ ಟ್ಯಾಂಕ್ ಸಮೀಪ ಘಟನೆ ನಡಿದಿದ್ದು ಕೆಇ ಬೋರ್ಡ್ ಶಾಲೆ ಪ್ರಿನ್ಸಿಪಾಲ್ ಸುನಿತಾ ಕಡಪಟ್ಟಿ ಹಾಗೂ ವಿದ್ಯಾರ್ಥಿಗಳಾದ ಪೂಜಾ ನಿಡಗುಂದಿ, ಚೈತ್ರಾ ಕೊಪ್ಪದ, ಅನ್ನಪೂರ್ಣ ಚಲವಾದಿ ಗಾಯಗೊಂಡಿದ್ದಾರೆ.
ಇವರೆಲ್ಲರೂ ಕಾಲೇಜಿನಲ್ಲಿ ನಡೆಯಲಿದ್ದ ಗಣರಾಜ್ಯೋತ್ಸವ ಧ್ವಜಾರೋಹಣಕ್ಕಾಗಿ ತೆರಳುತ್ತಿದ್ದಾಗ ಕಾರೊಂದು ಏಕಾಏಕಿ ನುಗ್ಗಿ ಒಟ್ಟು ಆರು ಮಂದಿ ಮೇಲೆ ಕಾರು ಹರಿದಿದ್ದು ಗಾಯಾಳುಗಳನ್ನು ಎಸ್ಡಿಎಂ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿಸಲಾಗಿದೆ.