ಮಾಜಿ ಸಿಎಂ ಟ್ವೀಟ್ ಗೆ ಸ್ಪಂಧಿಸಿದ ಸಚಿವ ಸುಧಾಕರ್..!

ಬೆಂಗಳೂರು

     ಮಂಡ್ಯದ ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರ್ಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ ಟ್ವೀಟ್ ಗೆ ಸಚಿವ ಡಾ.ಸುಧಾಕರ್ ಪ್ರತಿಕ್ರಿಯಿಸಿ ಚಿಕಿತ್ಸೆ ನೀಡುವ ಭರವಸೆ ನೀಡಿದ್ದಾರೆ.

    ಕರೆ ಕಾಮೇಗೌಡರು ಕೊರೋನಾ ಸೋಂಕಿನಿಂದ ಮಂಡ್ಯದ ಆಸ್ಪತ್ರೆಗೆ ದಾಖಲಾಗಿದ್ದು ಅವರ ಸ್ಥಿತಿ ಗಂಭೀರ ವಾಗಿದೆ.ಪ್ರಧಾನ ಮಂತ್ರಿ ಅವರೇ ಕರೆ ಕಾಮೇಗೌಡರ ಸಾಮಾಜಿಕ ಸೇವೆಯನ್ನು ಮೆಚ್ಚುಕೊಂಡು ಮನ್ ಕಿ ಬಾತ್ ನಲ್ಲಿ ಪ್ರಸಂಶೆ ವ್ಯಕ್ತಪಡಿಸಿದ್ದಾರೆ.ಅಂತೆಯೇ ಮುಖ್ಯಮಂತ್ರಿಗೂ,ಸರ್ಕಾರದ ಸಚಿವರೂ ಕಾಮೇಗೌಡರ ಜಲ ರಕ್ಷಣೆಗೆ ಯಶೋಗಾಥೆಯನ್ನು ಹೊಗಳಿಸಿದ್ದಾರೆ.ಆದರೆ ಅವರನ್ನು ಹೊಗಳಿ ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು.ವಯೋಸಹ ಹಾಗೂ ಕೋವಿಡ್ ಸೋಂಕಿನಿಂದ ಸಂಕಷ್ಟಕ್ಕೆ ಈಡಾಗಿರುವ ಕಾಮೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.

     ಮಾಜಿ ಮುಖ್ಯಮಂತ್ರಿ ಟ್ವೀಟ್ ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ತಮ್ಮ ಗಮನಕ್ಕೆ ಬಂದಿದೆ. ಕೂಡಲೇ ಮಂಡ್ಯ ವೈದ್ಯ ಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒಡಗಿಸಬೇಕೆಂ ದು ಸೂಚನೆ ನೀಡಿದ್ದೇನೆ.ಇಡೀ ದೇಶಕ್ಕೆ ಸ್ಪೂರ್ತಿಯಾಗಿರುವ ಕಾಮೇಗೌಡರು ಶೀಘ್ರವಾಗಿ ಗುಣಾಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಉತ್ತರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link