ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಲಿರುವ ಸಿಎಂ

ಬೆಂಗಳೂರು

       ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ಮತ್ತು ಕಬ್ಬು ಬೆಳೆಗೆ ಸೂಕ್ತ ಬೆಲೆ ನಿಗದಿ ಕುರಿತು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

        ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿರುವ ಕುಮಾರ ಸ್ವಾಮಿ, ರೈತರಿಗೆ ಬಾಕಿ ಹಣ ಪಾವತಿ ಮತ್ತು ಸರ್ಕಾರ ನಿಗದಿ ಮಾಡಿರುವ ಎಫ್.ಆರ್.ಪಿ ದರವನ್ನು ನೀಡುವ ವಿಚಾರದಲ್ಲಿ ಕಾರ್ಖಾನೆ ಮಾಲೀಕರನ್ನು ಮನವೊಲಿಸಲಿದ್ದಾರೆ.

       ಈ ಮಧ್ಯೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಶುಗರ್ಸ್ ಕಾರ್ಖಾನೆಯ ಮಾಲೀಕ ಹಾಗೂ ಶಾಸಕ ಸತೀಶ ಜಾರಕಿಹೊಳಿ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕರೆದಿರುವ ಸಭೆಯಲ್ಲಿ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಾರೆ.

        ಸಮಸ್ಯೆ ಇತ್ಯರ್ಥಪಡಿಸುವಾಗ ಸಕ್ಕರೆ ಕಾರ್ಖಾನೆಗಳು ಹಾಗೂ ರೈತರ ಹಿತಾಸಕ್ತಿ ಎರಡನ್ನೂ ಕಾಯ್ದುಕೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು. ತಮ್ಮ ಕಾರ್ಖಾನೆ ಸೇರಿದಂತೆ ಬೆಳಗಾವಿ ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗಳು ಕೇಂದ್ರ ಸರಕಾರ ನಿಗದಿಪಡಿಸಿದ ಬೆಲೆಯಂತೆ ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿ ಮಾಡಿವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link