ಮೈಸೂರು:
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡುವ ತಯಾರಿಯಲ್ಲಿರುವ ಸುಮಲತಾ ಅಂಬರೀಶ್ ಇಂದು ಸುತ್ತೂರು ಶ್ರೀಗಳನ್ನ ಭೇಟಿ ನೀಡಿ ಆಶೀರ್ವಾದ ಪಡೆದರು.ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿರುವ ಸುಮಲತಾ ಅಂಬರೀಶ್ ಇಂದು ಸುತ್ತೂರು ಮೂಲ ಮಠದ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಶ್ರೀಗಳ ಆರ್ಶಿವಾದ ಪಡೆದರು.
ಬಳಿಕ ಮಾತನಾಡಿದ ಸುಮಲತಾ ಅಂಬರೀಶ್, ಸುತ್ತೂರು ಸ್ವಾಮೀಜಿಯವರು ನಮ್ಮ ಕುಟುಂಬಕ್ಕೆ ಮೊದಲಿನಿಂದಲೂ ಪರಿಚಯಸ್ಥರು. ಇಂದು ಅವರನ್ನ ಭೇಟಿಯಾಗಿ ಆರ್ಶಿವಾದ ಪಡೆದಿದ್ದೇನೆ. ಮಗನ ಸಿನೆಮಾದ ಬಗ್ಗೆ ಸ್ವಾಮೀಜಿಗಳ ಜೊತೆ ಮಾತನಾಡಿದ್ದೇನೆ ಎಂದರು.
ಇಂದಿನರಾಜಕೀಯ ಬೆಳವಣಿಗೆ ನಿಮಗೆ ಗೊತ್ತಿದೆ. ಸದ್ಯ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮಂಡ್ಯ ಜಿಲ್ಲೆ ಪ್ರವಾಸ ಮಾಡುತ್ತೇನೆ. ಅಲ್ಲಿನ ಜನರ ಅಭಿಪ್ರಾಯ ಸಂಗ್ರಹ ಮಾಡುತ್ತೇನೆ. ಇಂದು ಸಹ ಕೆ.ಆರ್.ನಗರಕ್ಕೆ ಭೇಟಿ ನೀಡುತ್ತೇನೆ. ಸದ್ಯದ ಬೆಳವಣಿಗೆ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/03/02-03-19_-MYS_SUMALATHA-STA.gif)