ಬೆಂಗಳೂರಿನ ಆಡುಗೋಡಿಯಲ್ಲಿ ನಿಗೂಢ ಸ್ಪೋಟ..!

ಬೆಂಗಳೂರು: 

      ನಗರದ ಆಡುಗೋಡಿ ಬಳಿ ನಿಗೂಢ ಸ್ಪೋಟವೊಂದು ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬರ ಎಡಗಾಲು ತುಂಡಾಗಿದೆ . ಕಸದ ರಾಶಿಯ ನಡುವೆ ಈ ಸ್ಫೋಟ ಸಂಭವಿಸಿರುವುದು ಅಚ್ಚರಿ, ಆತಂಕ ಮೂಡಿಸಿದೆ. ಗಾಯಾಳುವನ್ನು 50 ವರ್ಷದ ನರಸಿಂಹಯ್ಯ ಎಂದು ಗುರಿತಿಸಲಾಗಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

      ಸ್ಥಳಕ್ಕೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ . ಇತ್ತೀಚಿನ ವರದಿಯ ಪ್ರಕಾರ ಗ್ರಾನೈಟ್ ಕತ್ತರಿಸುವ ಕೆಮಿಕಲ್ ಎಸೆದಿದ್ದು ಕೆಮಿಕಲ್ ರಿಯಾಕ್ಷನ್ ನ ಪರಿಣಾಮ ಈ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap