ಹರಪನಹಳ್ಳಿ:
ಚುನಾವಣೆಯಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಶೇಕಡ ಮತದಾನ ಹೆಚ್ಚಳವಾಗಲು ಜಾಗೃತಿ ಮೂಡಿಸಬೇಕು ಎಂದು ತಾಪಂ ಇ.ಓ.ಮಮತಗೌಡ ತಿಳಿಸಿದರು.
ಪಟ್ಟಣದ ಕಟ್ಟಿಸೇತುರಾಮಚಾರ್ಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುದುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಲಯ ಇವರ ಸಂಯುಕ್ತಾಶ್ರಯದಲ್ಲಿ ಮತದಾರರ ಸಾಕ್ಷರತಾ ಕ್ಲಬ್ಗಳ ಸಂಚಾಲಕರು ಹಾಗೂ ಬಿಎಲ್ಓಗಳಿಗೆ ಸ್ವೀಪ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾವು ಮತದಾನ ಮಾಡಿ, ನಂತರ ಇನ್ನೊಬ್ಬರಿಗೆ ಮತದಾನ ಮಾಡುವಂತೆ ಪ್ರೇರಣೆ ನೀಡಬೇಕು ಆದ್ದರಿಂದ ತರಬೇತಿ ಶಿಬಿರದ ಸದುಪಯೋಗ ಪಡೆದುಕೊಂಡು ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಎಂದು ಹೇಳಿದರು.ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುನಾಥಸ್ವಾಮಿ ವಹಿಸಿದ್ದರು. ಡಯಟ್ ಉಪನ್ಯಾಸಕ ಮಹೇಶ್ ದೊಡ್ಮನಿ, ಪ್ರಾಚಾರ್ಯ ಜಯಣ್ಣ, ಡಿ.ಎಸ್.ಲಿಂಗೇಶ್, ಉದಯಶಂಕರ್, ಮಲ್ಲಿಕಾರ್ಜುನ, ಹುಸೇನ್ಪೀರ್, ಆನಂದ ಹಾಗೂ ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
