ಬೆಂಗಳೂರು
ಇಲ್ಲಿಯವರೆಗೂ ಇದ್ದ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ಪರಿಶೀಲಿಸಿದ್ದು ನಾಳೆಯಿಂದ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಇಂದು ಶಿಕ್ಷಕರ ಕೌನ್ಸಿಲಿಂಗ್ ನಿಲ್ಲಿಸಿದ್ದಕ್ಕಾಗಿ ಅವರ ಮನೆಯ ಮುಂದೆ ಶಿಕ್ಷಕರ ಪ್ರತಿಭಟನೆಯ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈ ಕಡ್ಡಾಯ ವರ್ಗಾವಣೆ ಎಂಬ ನಿಯಮವೇ ಸರಿಯಿಲ್ಲ. ಇದರಿಂದ ಅನೇಕ ಶಿಕ್ಷಕರಿಗೆ ತೊಂದರೆ ಉಂಟಾಗುತ್ತಿದೆ. ಇಂತಹ ನಿಯಮ ಬದಲಾವಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ ಅಂತ್ಯದೊಳಗಾಗಿ ವರ್ಗಾವಣೆ ಪ್ರಕ್ರಿಯೆ ಮುಗಿಸುವುದಾಗಿ ತಿಳಿಸಿದ ಸಚಿವರು, ಕೋರಿಕೆ ವರ್ಗಾವಣೆ ಕಾಲಾವಕಾಶ ಮುಗಿದಿರುವ ಕಾರಣದಿಂದಾಗಿ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಅನ್ನು ಈ ತಿಂಗಳ ಅಂತ್ಯದೊಳಗೆ ಮುಗಿಸಿ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಹೀಗಾಗಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಿದೆ. ಇದು ಶೀಘ್ರದಲ್ಲಿದೇ ಆರಂಭಗೊಂಡು ಅಕ್ಟೋಬರ್ ಅಂತ್ಯದ ಒಳಗೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಗಿಸಲಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2019/02/Suresh-kumar.jpg)