ಬೆಂಗಳೂರು
ಜಾತಿ ರಾಜಕೀಯ ಮಾಡುವುದು ಬಿಜೆಪಿಯವರೇ ಹೊರತು ತಾವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಒಕ್ಕಲಿಗ ಜಾತಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂಬ ಮುನಿರತ್ನ ಆರೋಪಕ್ಕೆ ಪ್ರತಿಕ್ರಿಯಿಸಿದರು.
ನಾನು ಬಹಿರಂಗವಾಗಿ ಎಲ್ಲಿಯೂ ಕೂಡ ಹೇಳಿಕೆ ಕೊಟ್ಟಿಲ್ಲ. ಯಡಿಯೂರಪ್ಪ ಈ ಹಿಂದೆ ಗೋಕಾಕ್ನಲ್ಲಿ ವೀರಶೈವರು ಬಿಜೆಪಿಗೆ ಮತ ಹಾಕಿ ಎಂದು ಬಹಿರಂಗವಾಗಿ ಹೇಳಿದ್ದರು.ಈಗ ಸಿ.ಟಿ ರವಿ, ಅಶ್ವಥ್ ನಾರಾಯಣ, ಅಶೋಕ್ ಕೂಡ ಅದೇ ರೀತಿ ಹೇಳುತ್ತಿದ್ದಾರೆ. ಜಾತಿ ರಾಜಕೀಯ ಮಾಡುವುದು ಬಿಜೆಪಿಯರು. ನಮಗೆ ಕಾಂಗ್ರೆಸ್ ಒಂದೇ ಜಾತಿ ಎಂದರು.
ಮತದಾರರಿಗೆ ಭಾವಚಿತ್ರ ಹಾಕಿರುವ ಸೆಟ್ ಅಪ್ ಬಾಕ್ಸ್ ಹಂಚಿ ವ್ಯಾಪಾರ ಮಾಡಿದ್ದದ್ದನ್ನು ಮುನಿರತ್ನ ಅವರೇ. ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಬದುಕಿದ್ದರೆ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ಕಾನೂನಿನ ಅಡಿಯಲ್ಲಿ ತಕ್ಷಣ ಕ್ರಮಜರುಗಿಸಬೇಕೆಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/10/kusuma.gif)