ಬೆಂಗಳೂರು :
ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂಬುದಾಗಿ ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಕಳೆದ ನಿನ್ನೆ ನಡೆದಂತ ಕೆಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಉದ್ವಿಗ್ನತೆ ಈಗಾಗಲೇ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ನೂರಾರು ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಕುರಿತಂತೆ ಘಟನೆಯಲ್ಲಿ ಭಾಗಿಯಾದವರ ಪತ್ತೆ ಕಾರ್ಯ ನಡೆದಿದೆ ಎಂಬುದಾಗಿ ತಿಳಿಸಿದ್ರು.
ಇನ್ನೂ ಮುಂದುವರೆದು, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಯಿಂದ ಅಪಾರ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೀಗೆ ನಷ್ಟ ಉಂಟು ಮಾಡಿದಂತವರಿದಂಲೇ ನಷ್ಟವನ್ನು ವಸೂಲಿ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಗಲಭೆಗೆ ಕಾರಣರಾಗಿ ಹಾನಿ ಮಾಡಿದಂತವರಿಂದಲೇ ನಷ್ಟವನ್ನು ವಸೂಲಿ ಮಾಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
