ಅನುಮತಿಯಿಲ್ಲದೆ ಪ್ರತಿಭಟನೆ : ಎಫ್ ಐ ಆರ್ ದಾಖಲಿಸುವುದು ಖಚಿತ

ಬೆಂಗಳೂರು

    ಸಿಲಿಕಾನ್ ಸಿಟಿ ಪೊಲೀಸರ ಅನುಮತಿ ಇಲ್ಲದೆಯೂ ಸೋಮವಾರ ಕಾಂಗ್ರೆಸ್ ನಾಯಕರು ಒಗ್ಗೂಡಿ ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ಎಫ್‍ಐಆರ್ ದಾಖಲಿಸುವುದು ಖಚಿತ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಪೆಟ್ರೋಲ್ ಡೀಸಲ್ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಹೀಗಿದ್ದರೂ ಪ್ರತಿಭಟನೆ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಎಫ್‍ಐಆರ್ ದಾಖಲಾಗುವುದು ಖಚಿತ ಎಂದು ತಿಳಿಸಿದ್ದಾರೆ .

    ಮಧ್ಯಾಹ್ನದ ಬಳಿಕ ಎಫ್‍ಐಆರ್‍ನಲ್ಲಿ ಯಾವ ಯಾವ ನಾಯಕರ ಹೆಸರು ಇರಲಿದೆ ಎಂಬುದು ತಿಳಿಯಲಿದೆ ಎಂದು ಹೇಳಿದರು.ನಗರ ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಪ್ರತಿಕ್ರಿಯಿಸಿ, ಪ್ರತಿಭಟನೆ ಕೈಗೆತ್ತಿಕೊಂಡ ಕಾಂಗ್ರೆಸ್ ನಾಯಕರ ವಿರುದ್ಧ ಎಫ್‍ಐಆರ್ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

    ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಹೈಗ್ರೌಂಡ್ಸ್ ಪೊಲಿಸರು ತಿಳಿಸಿದ್ದರೂ, ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap