ಕಳೆದ ಬಾರಿಗಿಂತಲೂ ಹೆಚ್ಚಿನ ಹಾನಿ ಸಂಭವಿಸಿದೆ : ಬಿ ಎಸ್ ವೈ

ಬೆಂಗಳೂರು

    ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೆರೆಹಾನಿ ಸಂಭವಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿ ಸಮೀಕ್ಷೆ ಮಾಡಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಹಾನಿ ಪ್ರಮಾಣ ಹೆಚ್ಚಾಗಿದೆ ಎಂದರು.

    ಭಾರಿ ಪ್ರಮಾಣದಲ್ಲಿ ಬೆಳೆಹಾನಿ ಆಗಿದೆ. ಮನೆ ಕಳೆದುಕೊಂಡವರಿಗೆ ಈಗಾಗಲೇ ಹತ್ತು ಸಾವಿರ ರೂಪಾಯಿ ತಾತ್ಕಾಲಿಕ ಪರಿಹಾರ ವಿತರಣೆ ಮಾಡಿದ್ದೇವೆ. ಹಾನಿಯ ಅಂದಾಜಿನ ಬಗ್ಗೆ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ವಿವರಿಸಿದರು.ನೆರೆ ಹಾನಿ ಪರಿಹಾರ ಸಂಬಂಧ ಕೇಂದ್ರಕ್ಕೆ ಮನವಿ ಸಲ್ಲಿಸುತ್ತೇವೆ. ಎನ್ ಡಿ ಆರ್ ಎಫ್ ನಿಯಮಾವಳಿಗೆ ತಿದ್ದುಪಡಿ ಬಗ್ಗೆಯೂ ಪರಿಶೀಲಿಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap