ಧ್ವನಿವರ್ಧಕ ಸಂಘದವರಿಂದ ಪರಿಹಾರಕ್ಕೆ ಆಗ್ರಹ..!

ಚಳ್ಳಕೆರೆ

     ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಧ್ವನಿವರ್ಧಕ ಮತ್ತು ಲೈಟಿಂಗ್ ಸಂಘದ ಕಾರ್ಮಿಕರಿಗೆ ಯಾವುದೇ ರೀತಿಯ ಪರಿಹಾರವನ್ನು ಸರ್ಕಾರ ಘೋಷಿಸಿಲ್ಲ, ಸಂಘದ ಎಲ್ಲಾ ಕಾರ್ಮಿಕರಿಗೆ ಪರಿಹಾರ ನೀಡುವಂತೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರಿಗೆ ಸಂಘದ ವತಿಯಿಂದ ಮನವಿ ನೀಡಲಾಯಿತು.

     ಧ್ವನಿವರ್ಧಕ ಸಂಘದ ಪದಾಧಿಕಾರಿಗಳಾದ ಎಂ.ಮಂಜುನಾಥ, ಸಿ.ಶಿವಣ್ಣ, ನಾಗಣ್ಣ, ಎ.ಭಾಷ, ಚಿದಾನಂದ, ನಿಜಲಿಂಗಪ್ಪ, ಅಲ್ಲಾಬಕ್ಷಿ, ಅನ್ವರ್, ರಾಜು, ಹನುಮೇಶ್ ಮುಂತಾದವರು ಭಾನುವಾರ ಶಾಸಕ ಭವನಕ್ಕೆ ಆಗಮಿಸಿ ಶಾಸಕ ಟಿ.ರಘುಮೂರ್ತಿ ಯವರಿಗೆ ಮನವಿ ಅರ್ಪಿಸಿ, ತಾಲ್ಲೂಕಿನಾದ್ಯಂತ ಸುಮಾರು 300ಕ್ಕೂ ಹೆಚ್ಚು ಕುಟುಂಬಗಳು ಸಂಘದ ವ್ಯಾಪ್ತಿಯಲ್ಲಿ ಇದುವರೆಗೂ ಸರ್ಕಾರ ಯಾವುದೇ ಪರಿಹಾರವನ್ನು ಈ ಸಮುದಾಯಕ್ಕೆ ನೀಡಿಲ್ಲ. ಕೂಡಲೇ ತಾವು ಸಂಘದ ಎಲ್ಲಾ ಕಾರ್ಮಿಕ ಬಂಧುಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸಿಕೊಡುವಂತೆ ಮನವಿ ಮಾಡಿದರು.

     ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ, ಕಳೆದ ಸುಮಾರು ಎರಡು ತಿಂಗಳುಗಳಿಂದ ನಿರಂತರವಾಗಿ ಸಮಾಜದ ಎಲ್ಲಾ ವರ್ಗದ ಜನರನ್ನು ಗುರುತಿಸಿ ಅವರಿಗೆ ಉಚಿತವಾಗಿ ಆಹಾರ ಕಿಟ್ ನೀಡಲಾಗಿದೆ. ಆದರೂ ನಿಮ್ಮ ಭೇಡಿಕೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪರಿಹಾರ ಕೊಡಿಸಿಕೊಡುವ ಭರವಸೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap