ಪ್ರಧಾನಿಯ ತಪ್ಪು ಆರ್ಥಿಕ ನೀತಿಯಿಂದ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ : ದಿನೇಶ್ ಗುಂಡೂರಾವ್

ಬೆಂಗಳೂರು

    ಹಸಿವಿನ ಸೂಚ್ಯಂಕದಲ್ಲಿ ಭಾರತದ ಸ್ಥಾನ ಕುಸಿದಿರುವುದನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ .ಹಸಿವಿನಿಂದ ಪಾರು ಮಾಡಲು ಈ ಹಿಂದೆ ಯುಪಿಯ ಸರ್ಕಾರ ಆಹಾರ ಭದ್ರತಾ ನರೇಗಾ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇವುಗಳನ್ನು ಸಮಪರ್ಕವಾಗಿ ಅನುಷ್ಠಾನಕ್ಕೆ ತರುವಲ್ಲಿ ಎಡವಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

   ಮೋದಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ದೇಶದಲ್ಲಿ ಬಡತನ ಹೆಚ್ಚಾಗಿದೆ. ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನ ನಮಗಿಂತ ಉತ್ತಮ ಸ್ಥಿತಿಯಲ್ಲಿದ್ದಾರೆ. ಈಗಲಾದರೂ ಮೋದಿಯವರು ಎಚ್ಚೆತ್ತುಕೊಳ್ಳಬೇಕೆಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕುಟುಕಿದ್ದಾರೆ.

    ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ಗರಂ ಆಗಿರುವ ದಿನೇಶ್ ಗುಂಡೂರಾವ್, ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕೇಂದ್ರಕ್ಕೆ ನಿಯಮ ಮೀರಿ ನೆರೆ ಪರಿಹಾರ ಕೇಳುವುದಾಗಿ ಕಂದಾಯ ಸಚಿವರು ಹೇಳಿದ್ದರು. ಆದರೆ ಪರಿಹಾರ ಕೇಳಿದರೋ ಏನು ಮಾಡಿದರೋ ಗೊತ್ತಾಗಲಿಲ್ಲ. ಕೇಂದ್ರದ ಪರಿಹಾರದ ಕಥೆ ಏನಾಯಿತು? ಅಶೋಕ್ ಅವರು ಕೇಳಿದ ಪರಿಹಾರ ಕೊಟ್ಟರೋ? ರಾಜ್ಯ ಇದೀಗ ಪ್ರವಾಹಕ್ಕೆ ಸಿಲುಕಿದ್ದು, ಈ ಬಾರಿಯೂ ಗಾಳಿಯಲ್ಲಿ ಗುಂಡು ಹಾರಿಸಿ ದಿಕ್ಕು ತಪ್ಪಿಸುವ ಯೋಚನೆ ಇದೆಯಾ ಎಂದು ಲೇವಡಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap