ಬೆಂಗಳೂರು:
ರಾಜಸ್ತಾನದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟು ಸೂಕ್ತ ರೀತಿಯಲ್ಲಿ ಶಮನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಕೋವಿಡ್ -19 ಸಂಕಷ್ಟ ಪರಿಸ್ಥಿತಿಯಲ್ಲಿ ಅಧಿಕಾರ ಮುಖ್ಯವಲ್ಲ, ಸೋಂಕು ನಿವಾರಣೆ ಪ್ರಮುಖ ಪಾತ್ರವಹಿಸುತ್ತದೆ. ಸಚಿನ್ ಪೈಲಟ್ ಕಾಂಗ್ರೆಸ್ ತೊರೆಯುವುದಿಲ್ಲ. ಅವರ ಕುಟುಂಬ ಕಾಂಗ್ರೆಸ್ಗೆ ನಿಷ್ಟವಾಗಿದ್ದು, ಎಲ್ಲವೂ ಸುಗಮವಾಗಿ ಬಗೆಹರಿಯಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ -19 ಸೋಂಕು ನಿಯಂತ್ರಣ ಸಂದರ್ಭದಲ್ಲಿ ಆಗಿರುವ ಲೋಪದೋಷಗಳ ಬಗ್ಗೆ ಪಕ್ಷ ಪರಿಣಾಮಕಾರಿಯಾಗಿ ಬೆಳಕು ಚೆಲ್ಲಲಿದೆ. ಈ ಸಂಬಂಧ ಪಕ್ಷದ ವಲಯದಲ್ಲಿ ಸೂಕ್ತ ರೀತಿಯಲ್ಲಿ ಚರ್ಚೆ ಮಾಡಿ, ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
