ಅನ್ಯರಾಜ್ಯಗಳಿಗೆ ಶ್ರಮೀಕ್ ರೈಲು ಓಡಾಟ ಇದೇ 24ಕ್ಕೆ ಕೊನೆಯಾಗಲಿದೆ:ಡಿಸಿ

ಬಳ್ಳಾರಿ

    ಜಿಲ್ಲೆಯಲ್ಲಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ಅವರವರ ಸ್ವರಾಜ್ಯಕ್ಕೆ ತೆರಳಬೇಕಿದ್ದಲ್ಲಿ ಇದೇ ಜೂ.22 ಮತ್ತು 23ರಂದು ಮಧ್ಯಾಹ್ನ 2ರಿಂದ ಬಳ್ಳಾರಿಯ ಎನ್‍ಇಕೆಎಸ್‍ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆಯುವ ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

     ಸರಕಾರದ ನೇತೃತ್ವದಲ್ಲಿ ಅನ್ಯ ರಾಜ್ಯಗಳಿಗೆ ವಲಸೆ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಶ್ರಮಿಕ್ ರೈಲು ಓಡಾಟ ಇದೇ ಜೂ.24ರಂದು ಕೊನೆಯದ್ದಾಗಲಿದೆ. ಆದ್ದರಿಂದ ಜಿಲ್ಲೆಯಲ್ಲಿರುವ ಅನ್ಯ ರಾಜ್ಯಗಳ ವಲಸೆ ಕಾರ್ಮಿಕರು ತಮ್ಮ ರಾಜ್ಯಕ್ಕೆ ತೆರಳಲು ಇಚ್ಚಿಸಿದಲ್ಲಿ ಜೂ.22&23ರಂದು ಬಸ್ ನಿಲ್ದಾಣದಲ್ಲಿ

     ನಡೆಯುವ ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ವೈದ್ಯಕೀಯ ತಪಾಸಣಾ ಪ್ರಮಾಣಪತ್ರ ಹಾಗೂ ಇನ್ನಿತರ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದು ಅವರು ವಿವರಿಸಿದ್ದಾರೆ.ಇಲ್ಲಿ ತಪಾಸಣೆ ಮಾಡಿದ ನಂತರ ಯಾರು ಯಾವ ರಾಜ್ಯಕ್ಕೆ ಕಳುಹಿಸಬೇಕು ಎಂಬುದನ್ನು ಪಟ್ಟಿ ಮಾಡಿ ಅವರನ್ನು ಬಳ್ಳಾರಿಯಿಂದ ಬಸ್ ಮೂಲಕ ಆಹಾರ ಕಿಟ್ ಸೇರಿದಂತೆ ಅಗತ್ಯ ವಸ್ತುಗಳ ಸಮೇತ ಬೆಂಗಳೂರಿಗೆ ಕಳುಹಿಸಲಾಗುತ್ತದೆ.

      ಅಲ್ಲಿಂದ ಅವರವರ ರಾಜ್ಯಕ್ಕೆ ಕಳುಹಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಆದ ಕಾರಣ ಅನ್ಯರಾಜ್ಯಗಳ ವಲಸೆ ಕಾರ್ಮಿಕರಿಗೆ ಇದು ಅಂತಿಮ ಅವಕಾಶವಾಗಿದ್ದು,ಗಮನಹರಿಸಬೇಕು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು ನಂತರ ತೆರಳಲು ಇಚ್ಚಿಸಿದಲ್ಲಿ ಅದು ಅವರವರ ಸ್ವಂತ ಜವಾಬ್ದಾರಿಯಾಗಿರುತ್ತದೆ;ಜಿಲ್ಲಾಡಳಿತದ ಜವಾಬ್ದಾರಿಯಾಗಿರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap