ಬೆಂಗಳೂರು:
ಮುರುಗೇಶ ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ಬಹಿರಂಗ ಸಮಾವೇಶದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಚನನಾಂದ ಸ್ವಾಮೀಜಿ ಆವಾಜ್ ಹಾಕಿದ್ದ ಪ್ರಕರಣ ಮರೆಯಾಗುವ ಮುನ್ನವೇ ಮತ್ತೊಬ್ಬ ಸ್ವಾಮೀಜಿ ಸಿಎಂ ಗೆ ಧಮ್ಕಿ ಹಾಕಿದ್ದಾರೆ.
ಇನ್ನೊಂದು ವರ್ಷದ ಒಳಗಾಗಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರಿಗೆ ಸಚಿವ ಸ್ಥಾನ ನೀಡದೇ ಹೋದ್ರೆ 10 ಶಾಸಕರಿಂದ ರಾಜೀನಾಮೆ ಕೊಡಿಸುವೆ ಎಂದು ಶ್ರೀಶೈಲ ಸಾರಂಗ ಮಠದ ಡಾ ಸಾರಂಗಧರ ದೇಶೀಕೇಂದ್ರ ಸ್ವಾಮೀಜಿ ನೇರವಾಗಿ ಸಿಎಂ ಯಡಿಯೂರಪ್ಪನವರಿಗೇ ಎಚ್ಚರಿಕೆ ನೀಡಿದ್ದಾರೆ.
ಕಲಬುರಗಿ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಉಮೇಶ್ ಜಾಧವ್ ಗೆಲುವಿಗೆ ರೇವೂರ್ ಕಾರಣರಾಗಿದ್ದರು. ಆ ವೇಳೆ ಜಾದವ್ ಗೆದ್ದರೇ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಮೊದಲ ಹಂತದ ಹಾಗೂ ಎರಡನೇ ಹಂತದಲ್ಲಿ ಸಂಪುಟ ವಿಸ್ತರಣೆ ವೇಳೆ ತಮ್ಮ ಹೆಸರು ಇರಲಿದೆ ಎಂದು ರೇವೂರ ವಿಶ್ವಾಸ ಹೊಂದಿದ್ದರು. ಆದರೆ ಬಜೆಟ್ ಅಧಿವೇಶನದ ನಂತರ ನಡೆಯುವ ವಿಸ್ತರಣೆಯಲ್ಲೂ ತಮ್ಮ ಹೆಸರು ಇಲ್ಲ, ಹೀಗಾಗಿ ಸ್ವಾಮೀಜಿ ಮೊರೆ ಹೋಗಿದ್ದಾರೆ.
“ಉತ್ತರ ಮತ್ತು ಹೈದರಾಬಾದ್-ಕರ್ನಾಟಕ ಪ್ರದೇಶಗಳ ಅನೇಕ ಶಾಸಕರು ಅನೇಕ ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ ಮತ್ತು ಬಹಳ ಪ್ರಭಾವಶಾಲಿಯಾಗಿದ್ದಾರೆ, ಹೀಗಿದ್ದರೂ ಅವರಿಗೆ ಕ್ಯಾಬಿನೆಟ್ ಸ್ಥಾನಗಳನ್ನು ನಿರಾಕರಿಸಲಾಗಿದೆ. ಹೀಗಾಗಿ ಹಲವರು ತೀವ್ರ ಹತಾಶೆಗೊಳಗಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
