yellow alert ಘೋಷಿಸಿದ ಹವಾಮಾನ ಇಲಾಖೆ..!

ಬೆಂಗಳೂರು

     ಕೊರೊನಾವೈರಸ್ ಭೀತಿಯಲ್ಲಿ ಕರ್ನಾಟಕದಲ್ಲಿ ಲಾಕ್ಡೌನ್ ನಡುವೆ ರಾಜ್ಯದ ದಕ್ಷಿಣ ಒಳನಾಡು ಭಾಗಕ್ಕೆ ಹವಾಮಾನ ಇಲಾಖೆಯಿಂದ Yellow Alert ನೀಡಲಾಗಿದೆ.

     ಬೇಸಿಗೆ ಬಿಸಿಲಿನ ತಾಪ ಏರಿಕೆಯಾಗುತ್ತಿರುವ ವೇಳೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳು ಮಳೆಯಾಗುವ ಸೂಚನೆ ಇದ್ದು, ಮುಂದಿನ ದಿನಗಳಿಗೂ ವಿಸ್ತರಣೆಯಾಗಬಹುದು ಎಂದು ಹಮಾವಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಹೇಳಿದ್ದಾರೆ.

     ಹವಾಮಾನ ಇಲಾಖೆ ವರದಿ ಪ್ರಕಾರ ಏಪ್ರಿಲ್ 5 ರ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆ ಸುರಿಯುವ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಾತ್ರ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಪಾಟೀಲ ಹೇಳಿದರು.

     ಕಳೆದ 15 ದಿನಗಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳ ಸರಾಸರಿ ತಾಪಮಾನ ಕನಿಷ್ಠ 35 ಡಿಗ್ರಿ ಸೆಲ್ಸಿಯಸ್ ನಷ್ಟಿದೆ. ಕಲಬುರಗಿಯಲ್ಲಿ ಗರಿಷ್ಠ 40.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ಇದ್ದರೂ ಬಹುತೇಕ ಭಾಗಗಳಲ್ಲಿ ಮುಂದಿನ ವಾರದಲ್ಲಿ ತಾಪಮಾನ ಏರಿಕೆಯಾಗಲಿದೆ ಎಂದು ಇಲಾಖೆ ಹೇಳಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap