ಹುಳಿಯಾರು:
ಹುಳಿಯಾರು ಸಮೀಪದ ನಡುವನಹಳ್ಳಿಯ ಕೋಡಿ ಲಕ್ಕಮ್ಮ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಕಳ್ಳತನ ನಡೆದಿದೆ .ದೇವಸ್ಥಾನದ ಬಾಗಿಲ ಚಿಲಕ ಮುರಿದು ಒಳ ನುಗ್ಗಿರುವ ಕಳ್ಳರು ದೇವಸ್ಥಾನ ಹುಂಡಿ ಹೊಡೆದು ಹುಂಡಿಯಲ್ಲಿದ್ದ ಹಣ ದೋಚಿದ್ದಾರೆ. ಅಲ್ಲದೆ ದೇವರ ಮೇಲಿದ್ದ 2 ಚಿನ್ನದ ತಾಳಿ ಹಾಗೂ ಒಂದು ಜೊತೆ ಬೆಳ್ಳಿ ಕಾಲ್ಚೈನು ಕದ್ದಿದ್ದಾರೆ.ಹಂದನಕೆರೆ ಪೊಲೀಸರು ದೇವಸ್ಥಾನಕ್ಕೆ ಭೇಟಿ ನೀಡಿ ಅರ್ಚಕರಾದ ಕಲ್ಲೇಶ್ ಅವರಿಂದ ಕಳ್ಳತನದ ಬಗ್ಗೆ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/01/hliyar.gif)