ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆಗೆ ವ್ಯವಸ್ಥಿತ ಸಂಪರ್ಕಜಾಲ ಅಗತ್ಯ

ಬೆಂಗಳೂರು

    ಗ್ರಾಮೀಣ ಭಾಗಗಳಲ್ಲಿ ಸ್ವಚ್ಚತೆಯನ್ನು ಸುಸ್ಥಿರವಾಗಿ ಕಾಪಾಡಲು ಸಂಘಟಿತ ಪ್ರಯತ್ನದಿಂದ ಮಾತ್ರ ಸಾಧ್ಯ. ಇದಕ್ಕಾಗಿ ಹಳ್ಳಿಗಳಲ್ಲಿ ಮೊಬೈಲ್ ಬಳಕೆದಾರರ ವ್ಯವಸ್ಥಿತ ಸಂಪರ್ಕಜಾಲ ರೂಪಿಸಬೇಕಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

     ಯೂನಿಸೆಫ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ “ಬಯಲು ಬರ್ಹಿದೆಸೆ ಮುಕ್ತ – ಸುಸ್ಥಿರತೆ ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ಬಳಕೆದಾರರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ರಾಜ್ಯದ ಅಷ್ಟೂ ಗ್ರಾಮ ಪಂಚಾಯಿತ ಸದಸ್ಯರು ಹಾಗೂ ಅವರ ಸಂಪರ್ಕದಲ್ಲಿರುವ ಮೊಬೈಲ್ ಬಳಕೆದಾರರು ಈ ಸ್ವಚ್ಚತೆಯ ಅಭಿಯಾನದಲ್ಲಿ ಮೊಬೈಲ್ ಮೂಲಕ ಮಾಹಿತಿ ವಿನಿಯಮ ಮತ್ತು ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರೆ ದೊಡ್ಡ ಪ್ರಮಾಣದಲ್ಲಿ ನಾವು ಜನರನ್ನು ತಲುಪಬಹುದಾಗಿದೆ. ಅದಕ್ಕೆ ಒಂದು ವ್ಯವಸ್ಥಿತ ಸಂಪರ್ಕಜಾಲ ರೂಪಿಸಬೇಕಾಗಿದೆ ಎಂದರು.

      ಕರ್ನಾಟಕ ಮುಂದಿನ ಒಂದು ತಿಂಗಳಲ್ಲಿ ಸಂಪೂರ್ಣ “ಬಯಲು ಬರ್ಹಿದೆಸೆ ಮುಕ್ತ “ಗುರಿಯನ್ನು ಸಾಧಿಸಲಿದೆ. ನಮ್ಮ ಗುರಿಗೆ ಅನುಗುಣವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

     ಶೌಚಾಲಯಗಳನ್ನು ಬಳಸುವುದು ಬಹಳ ಮುಖ್ಯ. ಜನ ಈ ಶೌಚಾಲಯಗಳ ಬಳಕೆಯನ್ನು ಆರಂಭಿಸಿದಾಗ ಮಾತ್ರ ಯೋಜನೆ ಸಾರ್ಥಕವಾಗುತ್ತದೆ. ಆ ದಿಸೆಯಲ್ಲಿ ಜನರ ಆಲೋಚನೆ ಮತ್ತು ಜೀವನ ಶೈಲಿ ಬದಲಾವಣೆ ಆಗಬೇಕಾಗಿದೆ. ಈ ಬದಲಾವಣೆ ತರಲು ಒಂದು ಜಾಗೃತಿ ಆಂದೋಲನವನ್ನು ಆಯೋಜಿಸುವುದು ಬಹಳ ಮುಖ್ಯವಾಗಿದೆ ಎಂದರು.

      ಯೂನಿಸೆಫ್ ಪ್ರತಿನಿಧಿ ಮಿಟಲ್ ರೂಸಾಡಿಯಾ ಯೂನಿಸೆಫ್ ಮಾತನಾಡಿ, ಕರ್ನಾಟಕ ಸರ್ಕಾರದ “ಬಯಲು ಬರ್ಹಿದೆಸೆ ಮುಕ್ತ” ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ನೆರವು ನೀಡಲು ಯುನೆಸೆಫ್ ಸಿದ್ದವಿದೆ. ಶೌಚಾಲಯಗಳ ನಿರ್ಮಾಣದ ಜೊತೆಗೆ ಅವುಗಳ ನಿರ್ವಹಣೆಗೂ ಸಹ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link