ಚಳ್ಳಕೆರೆ
ನಗರದ ಬಹುತೇಕ ಎಲ್ಲಾ ಶುದ್ದ ಕುಡಿಯುವ ನೀರಿನ ಘಟಕಗಳಲ್ಲಿ ಪ್ರಸ್ತುತ ಸಮರ್ಪಕವಾಗಿ ಕುಡಿಯುವ ನೀರು ದೊರೆಯುತ್ತಿದ್ದು, ಯಾವುದೇ ರೀತಿಯ ಸಮಸ್ಯೆಗಳು ಉಂಟಾದಲ್ಲಿ ಕೂಡಲೇ ಗಮನಕ್ಕೆ ತರುವಂತೆ ಪೌರಾಯುಕ್ತ ಜೆ.ಟಿ.ಹನುಮಂತರಾಜು ಸಾರ್ವಜನಿಕರಲ್ಲಿ ಮನವಿ ಮಾಡಿದ್ಧಾರೆ.
ಅವರು, ಭಾನುವಾರ ನಗರದ 10ನೇ ವಾರ್ಡ್ನ ಕುಡಿಯುವ ಶುದ್ದ ನೀರಿನ ಘಟಕಕ್ಕೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗೆ ನಿರ್ದೇಶನ ನೀಡಿದ ಪೌರಾಯುಕ್ತರು, ಸಮಯಕ್ಕೆ ಸರಿಯಾಗಿ ಎಲ್ಲರಿಗೂ ಸಮರ್ಪಕವಾಗಿ ನೀರು ವಿತರಣೆ ಮಾಡಬೇಕು, ಘಟಕದ ಸುತ್ತಲು ಸ್ವಚ್ಚತೆಯನ್ನು ಕಾಪಾಡಬೇಕು, ಪ್ರತಿನಿತ್ಯ ಶುದ್ದೀಕರಣ ಯಂತ್ರವನ್ನು ಪರಿಶೀಲಿಸಿ ನೀರಿನ ಟ್ಯಾಂಕರಿಗೆ ನೀರು ಸಂಗ್ರಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದರು.