ಬೆಂಗಳೂರು:
ಇಂದು ಮುಂಜಾನೆ ವಿಧಾನಸೌಧ ಮುಂಭಾಗದಲ್ಲಿ ನೂತನ ಮತ್ತು ವಿವಿಧ ಮಾದರಿಯ ಕೆಎಸ್ಆರ್ಟಿಸಿಯ ಬಸ್ಸುಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಸಿರು ನಿಶಾನೆ ತೋರಿಸಿದ್ದಾರೆ.
ಈ ಬಸ್ಸುಗಳಲ್ಲಿ ಅಂಬಾರಿ ಡ್ರೀಮ್ ಕ್ಲಾಸ್- 5, ಐರಾವತ ಕ್ಲಬ್ ಕ್ಲಾಸ್ – 3, ಐರಾವತ – 4, ನಾನ್ ಎಸಿ ಸ್ಲೀಪರ್ – 01, ರಾಜಹಂಸ – 2, ಕರ್ನಾಟಕ ಸಾರಿಗೆ – 5, ಒಟ್ಟು 20 ಬಸ್ಸುಗಳನ್ನು ಅವರು ಲೋಕಾರ್ಪಣೆ ಮಾಡಿದರು, ಆದರೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು ಗೈರಾಗಿದ್ದರು. ಬೆಂಗಳೂರು – ಶಿಕಾರಿಪುರ ಮಾರ್ಗದ ಬಸ್ಸಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸ್ವಲ್ಪ ದೂರು ಪ್ರಯಾಣಿಸಿದ ಪ್ರಸಂಗವು ನಡೆಯಿತು
ಈ ಮೊದಲು ಪ್ರಥಮ ಕಂತಿನಲ್ಲಿ 1,200 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಆದರೆ ಈಗ ಬಿಡುಗಡೆ ಆಗಿರುವ ಹಣ ಸಾಕಾಗುವುದಿಲ್ಲ. ಈಗ ಎರಡನಬೇ ಕಂತಿನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ಮತ್ತೆ ಹಣ ಬಿಡುಗಡೆ ಮಾಡುವ ವಿಶ್ಚಾಸ ಇದೆ ಎಂದರು.
ಈಗಾಗಲೇ ಬಜೆಟ್ ಪೂರ್ವ ಭಾವಿ ತಯಾರಿ ಆರಂಭಿಸಲಾಗಿದೆ. ನಿನ್ನೆ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು ಮುಂಬರುವ ದಿನಗಳಲ್ಲಿ ಉಳಿದ ಇಲಾಖೆಗಳ ಜೊತೆ ಸಭೆ ಮಾಡಲಾಗುವುದು. ಈಗ ಯಾವ ಇಲಾಖೆಗಳಲ್ಲಿ ಏನೇನು ಆಗಿದೆ, ಮುಂದಿನ ಬಜೆಟ್ ನಲ್ಲಿ ಏನು ಮಾಡಬೇಕು ಎಂದು ಚರ್ಚಿಸಲಾಗಿದೆ. ಈ ಬಾರಿ ಎಲ್ಲರ ಅಭಿಪ್ರಾಯ ಪಡೆದು ಒಳ್ಳೆಯ ಬಜೆಟ್ ಮಂಡನೆ ಮಾಡುತ್ತೇನೆ. ರೈತ ಪರ ಬಜೆಟ್ ಮಂಡನೆ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
