ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲಾ: ಸುಮಲತಾ

ಬೆಂಗಳೂರು:

       ಮಂಡ್ಯ ಲೋಕಸಭಾ ಕಣದಿಂದ ಸುಮಲತಾ ಹಿಂದೆ ಸರಿಯಲ್ಲಿದ್ದಾರೆಂಬ ವದಂತಿಗೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದಾರೆ.

       ತಮ್ಮ ಅಧಿಕೃತ ಫೇಸ್ ಬುಕ್ ಪೇಜ್‍ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯ ಜನರ ಋಣ ತೀರಿಸಲು ನಾನು ಬದ್ದಳಾಗಿದ್ದು, ಮಂಡ್ಯ ಜನರನ್ನು ದಿಕ್ಕು ತಪ್ಪಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

       ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸುಮಲತಾ ಸ್ಪರ್ಧಿಸುತ್ತಿಲ್ಲ, ಕಾಂಗ್ರೆಸ್ ನಾಯಕರು ಸಹಕಾರ ನೀಡದ ಹಿನ್ನೆಲೆ ಅವರು ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಜನತೆಗೆ ಮನವಿ ಮಾಡಿದ್ದಾರೆ.

      ನಿನ್ನೆ ದಿಲ್ಲಿಯಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಸುಮಲತಾ ಕಾಂಗ್ರೆಸ್‍ನಿಂದ ಸ್ಪರ್ಧೆ ಮಾಡಲ್ಲ,ಯಾವ ಕಾಂಗ್ರೆಸ್ ನಾಯ ಕರೂ ಸುಮಲತಾ ಬೆನ್ನಿಗಿಲ್ಲ.ಟಿಕೆಟ್ ನೀಡಲ್ಲ ಎಂದು ನಾನು ಅವರಿಗೆ ಮೊದಲೇ ಹೇಳಿದ್ದೇನೆ ಎಂದಿದ್ದರು.ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಹಕಾರ ಕೈತಪ್ಪಲಿದ್ದು, ಕಣದಿಂದ ಸುಮಲತಾ ಹಿಂದೆ ಸರಿಯಲಿದ್ದಾರೆ ಎಂಬ ವದಂತಿ ಹಬ್ಬಿತ್ತು.ಇದೀಗ ಅದಕ್ಕೆ ಸ್ಪಷ್ಟನೆ ನೀಡಿದ ಸುಮಲತಾ ಅಂಬರೀಶ್ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link