ಸಚಿವ ಜಿಟಿಡಿ ಹೇಳಿಕೆ ಹಿಂದೆ ಸಿಎಂ ಕೈವಾಡ

ಬೆಂಗಳೂರು:

          ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ.ಟಿ. ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.

         ಮಂಡ್ಯ ಕಾಂಗ್ರೆಸ್‍ನ ಮುಖಡರಾದ ಚಲುವರಾಯಸ್ವಾಮಿ,ನರೇಂದ್ರಸ್ವಾಮಿ ಸೇರಿ ಕೆಲವು ಮುಖಂಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.ಈ ಕುರಿತ ವಿಡಿಯೂ ವೈರಲ್ ಆಗಿತ್ತು.

        ಈ ಡಿನ್ನರ್ ಪಾರ್ಟಿ ಆದಮಾರನೇ ದಿನ ಸಚಿವ ಜಿ.ಟಿ ದೇವೇಗೌಡರು,ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದರು.

       ಹೀಗಾಗಿ ಡಿನ್ನರ್ ಪಾರ್ಟಿ ಕುರಿತು ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಿದ್ದು,ಇದನ್ನ ಖಚಿತ ಪಡಿಸಿಕೊಂಡ ಸಿಎಂ ಕುಮಾರಸ್ವಾಮಿ , ಸುಮಲತಾ ಔತಣಕೂಟದ ನಂತರ ಬೆಳಿಗ್ಗೆ ಸಚಿವ ಜಿ.ಟಿ ದೇವೇಗೌಡರಿಂದ ಈ ಹೇಳಿಕೆ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಔತಣ ಕೂಟದ ವಿಡಿಯೋವನ್ನು ಜೆಡಿಎಸ್ ನವರೇ ಹರಿಬಿಟ್ಟಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಚಿತಪಡಿಸಿಕೊಂಡಿರುವ ಕಾಂಗ್ರೆಸ್ ನಾಯಕರು ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪ್ಲಾನ್ ಬಗ್ಗೆ ಅನುಮಾನದ ಕಣ್ಣಿಟ್ಟಿದ್ದಾರೆನ್ನಲಾಗಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap