ಪೌರತ್ವ ಕಾಯಿದೆ ತಿದ್ದುಪಡಿಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯಾಗದು : ರಾಜನಾಥ್ ಸಿಂಗ್

ಮಂಗಳೂರು

    ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಯತ್ನಿಸಿದ್ದು ಕಾಂಗ್ರೆಸ್. ಬಿಜೆಪಿ ದೇಶದ ರಕ್ಷಣೆಗೆ ಕೆಲಸ ಮಾಡುತ್ತಿದೆ. ಒಂದು ದೇಶದಲ್ಲಿ ಎರಡು ಸಂವಿಧಾನ, ಎರಡು ಧ್ವಜ ಇರಬಾರದು. ಭಾರತಕ್ಕೆ ಇರುವುದು ಒಂದೇ ತ್ರಿವರ್ಣ ಧ್ವಜ. ಪೌರತ್ವ ತಿದ್ದುಪಡಿ ಕಾಯ್ದೆ ಮಹಾತ್ಮ ಗಾಂಧಿ ಕನಸಾಗಿತ್ತು. ಗಾಂಧಿ ಕನಸನ್ನು ಬಿಜೆಪಿ ಪೂರೈಸಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

    ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಸಿಎಎ ಪರವಾದ ಬಿಜೆಪಿ ಜನಜಾಗೃತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.ನಾವು ಪ್ರಣಾಳಿಕೆಯಲ್ಲಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ರಾಮಮಂದಿರ ನಿರ್ಮಾಣ, ಜಮ್ಮು ಕಾಶ್ಮೀರದ 370 ವಿಧಿ ರದ್ದತಿ ಮಾಡಿದ್ದೇವೆ. ಶೀಘ್ರವೇ ಅಯೋಧ್ಯೆಯಲ್ಲಿ ರಾಮಂದಿರ ನಿರ್ಮಿಸಲಿದ್ದೇವೆ, ನೀವು ಇನ್ನು ಪ್ರಾರ್ಥನೆ ಸಲ್ಲಿಸಬಹುದು.

     ಈ ಹಿಂದೆ ತಲಾಖ್ ಮೂಲಕ ಮುಸ್ಲಿಂ ಹೆಣ್ಮಕ್ಕಳು ತೊಂದರೆ ಅನುಭವಿಸುತ್ತಿದ್ದರು. ನಾವು ಅಧಿಕಾರಕ್ಕೆ ಬಂದ ನಂತರ ತ್ರಿಪಲ್ ತಲಾಖ್ ರದ್ದು ಮಾಡಿದ್ದೇವೆ ಎಂದು ಹೇಳಿದರು.ಎನ್‌ಪಿಆರ್ ನಿಂದ ಏನು ತೊಂದರೆ ಇದೆ..? ದೇಶದ ಜನರ ಬಗ್ಗೆ ಲೆಕ್ಕ ಇಟ್ಟುಕೊಳ್ಳಬಾರದೇ..? ಎನ್‌ಆರ್‌ಸಿ ಬಗ್ಗೆ ಇವಾಗ ಏನೂ ಚರ್ಚೆಯಾಗಿಲ್ಲ.

   ಆದರೆ ದೇಶದ ಮುಸ್ಲಿಮರಲ್ಲಿ ಭಯ ಮೂಡಿಸಲಾಗುತ್ತಿದೆ. ಭಾರತದ ಮುಸ್ಲಿಮರಿಗೆ ಯಾರೂ ಏನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಮುಸ್ಲಿಮರೇ ಕೇಂದ್ರ ಸರ್ಕಾರ ನಿಮಗೆ ರಕ್ಷಣೆ ನೀಡುತ್ತದೆ. ನಮ್ಮದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಆಗಿದೆ. ಪೌರತ್ವ ಕಾಯ್ದೆಯಿಂದ ದೇಶದ ಜನರಿಗೆ ಏನೂ ತೊಂದರೆ ಆಗುವುದಿಲ್ಲ ಎಂದರು.ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಾಂದ್ಲಾಜೆ ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap