ಹೊಸದುರ್ಗ:

ಹೊಸದುರ್ಗ ವೃತ್ತದ ವೃತ್ತ ನಿರೀಕ್ಷಕರಾದ ಶ್ರೀ.ರುದ್ರಪ್ಪ.ಎಲ್. ರವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಇವರು ತಮ್ಮ ಸಿಬ್ಬಂದಿಯವರೊಂದಿಗೆ ದಾಳಿ ನಡೆಸಿ ಬೋಕಿಕೆರೆ ಗ್ರಾಮದ ಹೊರ ವಲಯದಲ್ಲಿರುವ ಫಿಲ್ಟರ್ ನೀರಿನ ಟ್ಯಾಂಕ್ ಹತ್ತಿರ ಸಾರ್ವಜನಿಕ ರಸ್ತೆಯ ಬೀದಿ ದೀಪದ ಬೆಳಕಿನಲ್ಲಿ ಕಾನೂನು ಬಾಹಿರವಾಗಿ ಅಂದಾರ್ ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿದ್ದ 7 ಜನರನ್ನು ಮತ್ತು ಇಸ್ಪೀಟ್ ಜೂಜಾಟಕ್ಕೆ ಸಂಬಂಧಿಸಿದ್ದ 23,200/- ನಗದು ಹಣವನ್ನು ವಶಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
