ಆದಾಯ ತೆರಿಗೆ ಇಲಾಖೆಯ ದಾಳಿಯು ಸಂಪೂರ್ಣ ರಾಜಕೀಯ ಪ್ರೇರಿತ : ಡಾ.ಜಿ.ಪರಮೇಶ್ವರ್

ಬೆಂಗಳೂರು

      ಜೆಡಿಎಸ್‍ನ ಸಚಿವರು ಮುಖಂಡರುಗಳ ಮೇಲಿನ ಆದಾಯ ತೆರಿಗೆ ಇಲಾಖೆಯ ದಾಳಿಯು ಸಂಪೂರ್ಣ ರಾಜಕೀಯ ಪ್ರೇರಿತ ಎಂಬುದು ಸ್ಪಷ್ಟ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದ್ದಾರೆ.ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆಪ್ತರ ಮನೆಗಳ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ನೀಡಿದ ಮಾಹಿತಿ ಬೆನ್ನಲ್ಲೇ ಸಚಿವ ಪುಟ್ಟರಾಜು ಅವರ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿಸಿದ್ದಾರೆ

      ಸದಾಶಿವನಗರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಈಗ ಲೋಕಸಭಾ ಚುನಾವಣೆ ವೇಳೆ ಕೂಡ ದಾಳಿ ಅಸ್ತ್ರ ಪ್ರಯೋಗಿಸುತ್ತಿದ್ದಾರೆ.ಆದಾಯ ತೆರಿಗೆ ಇಲಾಖೆ ಅವರು ದಾಳಿ ಮಾಡುವ ಸ್ವಾತಂತ್ರ್ಯವಿದೆ.ಆದರೆ, ಬಿಜೆಪಿ ನಾಯಕರ ಮನೆ ಮೇಲೆ ಯಾಕೆ ದಾಳಿಯಾಗುವುದಿಲ್ಲ ಎಂದು ಪ್ರಶ್ನಿಸಿದರು.

     ಕೇಂದ್ರ ಸರಕಾರ ಐಟಿಯನ್ನು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಜನರ ಗಮನಕ್ಕೆ ತರಲಾಗುತ್ತದೆ. ಕೇಂದ್ರ ಸರಕಾರ ಎಷ್ಟೇ ದಾಳಿ ಅಸ್ತ್ರ ಬಿಟ್ಟರು ಅದಕ್ಕೆ ನಾವು ಭಯ ಪಡುವುದಿಲ್ಲ. ಜನರು ನಮ್ಮ ಜೊತೆ ಇದ್ದಾರೆ ಎಂದರು. ದಾಳಿ ಇನ್ನಷ್ಟು ಹೆಚ್ಚಿದರೆ ತಕ್ಕ ಉತ್ತರ ನೀಡಲಾಗುವುದು ಎಂದು ಎಚ್ಚರಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap