ಬೆಂಗಳೂರು:
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣಾ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ನೀಡಿದ್ದ ಮೊದಲ ಪ್ರತಿಕ್ರಿಯೆ, ದೇಶ ಮೊದಲು ಎಂದು ಹೇಳಿದ್ದರು. ಸದ್ಯ ಅದೇ ಮಾರ್ಗ ಅನುಸರಿಸಿರುವ ತುಳಸಿ ಮುನಿರಾಜು ಗೌಡ
“ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.