ತೇಜಸ್ವಿನಿ ಅನಂತಕುಮಾರ್ ಹಾದಿ ತುಳಿದ ತುಳಸಿ ಮುನಿರಾಜು..!

ಬೆಂಗಳೂರು:

     ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.

    ಕಳೆದ ಲೋಕಸಭೆ ಚುನಾವಣಾ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ನೀಡಿದ್ದ ಮೊದಲ ಪ್ರತಿಕ್ರಿಯೆ, ದೇಶ ಮೊದಲು ಎಂದು ಹೇಳಿದ್ದರು. ಸದ್ಯ ಅದೇ ಮಾರ್ಗ ಅನುಸರಿಸಿರುವ ತುಳಸಿ ಮುನಿರಾಜು ಗೌಡ 
“ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

    ಆರ್ ಆರ್ ನಗರ ಉಪ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜು ಟಿಕೆಟ್ ತಮಗೆ ದೊರೆಯುತ್ತದೆ ಎಂಬ ಆತ್ಮ ವಿಶ್ವಾಸದಿಂದ ತಮ್ಮ ಬೆಂಬಲಿಗರ ಜೊತೆ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ನಾಯಕರು ನೀಡಿದ್ದ ಭರವಸೆಯಂತೆ ಮುನಿರತ್ನಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ತುಳಸಿ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap