ಮಧುಗಿರಿ
ಆಟವಾಡುತ್ತಿದ್ದ ಮಕ್ಕಳಿಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಅಸು ನೀಗಿರುವ ದಾರುಣ ಘಟನೆ ತಾಲ್ಲೂಕಿನ ಮರಿತಿಮ್ಮನಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಗ್ರಾಮದ ಕೃಷ್ಣ ಎಂಬುವವರ ಮಕ್ಕಳಾದ ಶರತ್ (5 ) ಹಾಗೂ ಲೋಚನ (3) ಮೃತ ದುರ್ದೈವಿಗಳಾಗಿದ್ದು, ಬೆಳಗ್ಗೆ ಪೋಷಕರು ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ಮಗ್ನರಾಗಿದ್ದ ವೇಳೆ ಈ ಘಟನೆ ಜರುಗಿದೆ. ಮಕ್ಕಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆದ ತಕ್ಷಣ ಗ್ರಾಮದ ಜನರು ಸ್ಥಳಕ್ಕೆ ಭೇಟಿ ನೀಡಿ ಮೃತಪಟ್ಟಿದ್ದ ಮಕ್ಕಳನ್ನು ಕಂಡು ಮಮ್ಮಲ ಮರುಗಿದರು.
ಗ್ರಾಮೀಣ ಭಾಗದಲ್ಲಿ ಕೃಷಿ ಹೊಂಡಗಳು ಮಕ್ಕಳ ಬಲಿಗಾಗಿ ಬಾಯ್ತೆರೆದು ಕಾಯುತ್ತಿದ್ದು, ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ವೈವಸ್ಥೆ ಮಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/08/02-Madhugiri-03-Crime.gif)