ಇಬ್ಬರು ಮುಖಂಡರನ್ನು ಅಮಾನತ್ತು ಮಾಡಿದ ಕೆಪಿಸಿಸಿ

ಬೆಂಗಳೂರು

     ಪಕ್ಷ ವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಕಾಂಗ್ರೆಸ್ ನಾಯಕರನ್ನು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರು ವರ್ಷ  ಅಮಾನತ್ತು ಮಾಡಿದೆ.

       ಪ್ರಮೋದ್ ಮಧ್ವರಾಜ್ ಅವರು ಜೆಡಿಎಸ್‌ ಪಕ್ಷದ ಚಿಹ್ನೆಯ ಮೂಲಕ ಕಣಕ್ಕೆ ಇಳಿದಿರುವ ಉಡುಪಿ-ಚಿಕ್ಕಮಗಳೂರಿನಲ್ಲಿ ಅವರ ವಿರುದ್ಧ ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದ ಅಮೃತ್ ಶಣೈ ಅವರನ್ನು ಕೆಪಿಸಿಸಿಯು ಆರು ವರ್ಷ ಅಮಾನತ್ತು ಮಾಡಿದೆ.

        ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಕಾರಣ ಬಿಎಸ್‌ಪಿ ಟಿಕೆಟ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಎದುರು ಸ್ಪರ್ಧಿಸಿರುವ ಶಾನುಲ್ ಹಖ್ ಬುಖಾರಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಹೊರಗಿಡಲಾಗಿದೆ ಎಂದು ತಿಳಿದು ಬಂದಿದೆ.

Recent Articles

spot_img

Related Stories

Share via
Copy link
Powered by Social Snap