ತಿಪಟೂರು
ನಗರದ ವಿಜಯಲಕ್ಷ್ಮಿ ಪೆಟ್ರೋಲ್ ಬಂಕ್ ಬಳಿ ವ್ಯಕ್ತಿಯೋರ್ವ ಪೆಟ್ರೋಲ್ ಹಾಕಿಸುವ ಸಂದರ್ಭದಲ್ಲಿ ಹೃದಯಾಘಾತವಾಗಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಜರುಗಿದೆ.ಸುಮಾರು 55-60 ವಯಸ್ಸಿನ ಮೃತ ವ್ಯಕ್ತಿಯು ಟಿ.ವಿ.ಎಸ್ ಎಕ್ಸೆಲ್ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಬಂದಾಗ ಘಟನೆ ಜರುಗಿದೆ. ಮೃತರ ಹೆಸರು ಮತ್ತು ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ. ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈತನ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ತಿಪಟೂರು ನಗರ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ ಈ ನಂಬರ್ಗಳನ್ನು (08134-251007, 9480802970) ಸಂಪರ್ಕಿಸಲು ಕೋರಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ