ಹಾಸನ:
ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿರುವ ಘಟನೆ ಹಾಸನದಲ್ಲಿ ವರದಿಯಾಗಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ ಎಂದು ತಿಳಿದುಬಂದಿದೆ. ಹಾಸನದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದಿಂದ ಎನ್ಆರ್ ವೃತ್ತದವರೆಗೆ ನಿರ್ಮಾಣವಾಗುತ್ತಿದ್ದ ಮೇಲ್ಸೇತುವೆ ಕುಸಿದು ಬಿದ್ದಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಜನ ಯಾವಾಗಲೂ ಸೇತುವೆಯ ಕೆಳಗಿರುತ್ತಿದ್ದರು ಎಂದು ತಿಳಿದು ಬಂದಿದೆ, ಆದರೆ ಕೊರೋನಾ ಭೀತಿಯಿಂದ ಜನ ಆಚೆ ಬರದ ಕಾರಣ ಪ್ರಾಣಾಪಾಯ ತಪ್ಪಿದೆ ಎನ್ನಲಾಗಿದೆ.ಕೇಂದ್ರ ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರ ಸಹಭಾಗಿತ್ವದಲ್ಲಿ 42 ಕೋಟಿ ವೆಚ್ಚದಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿತ್ತು. ದಶಕಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗ ಇದಕ್ಕೆ ಅನುಮೋದನೆ ನೀಡಲಾಗಿತ್ತು. ಘಟನೆ ನಡೆದಾಗ ಸ್ಥಳದಲ್ಲಿ ಕಂಟ್ರಾಕ್ಟರ್ ಆಗಲಿ ಇಂಜಿನೀಯರ್ ಆಗಲಿ ಇರಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/03/hasan-new.gif)