ತುರ್ತು ಕುಡಿಯುವ ನೀರಿನ ಪೂರೈಕೆಗಾಗಿ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು:

      ತುರ್ತು ಕುಡಿಯುವ ನೀರಿನ ಪೂರೈಕೆಗಾಗಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.ರಾಜ್ಯದ 30 ಜಿಲ್ಲೆಗಳ 176 ತಾಲೂಕುಗಳಿಗೆ ತಾಲೂಕುವಾರು ಒಟ್ಟು 33.45 ಲಕ್ಷ ರೂ.ಅನುದಾನ ಬಿಡುಗಡೆ ಮಾಡಿದ್ದು, ಈ ಸಂಬಂಧ ಕೆಲವೊಂದು ನಿಬಂಧನೆಗಳನ್ನು ವಿಧಿಸಿದೆ.

       ತೀವ್ರ ಅನಿವಾರ್ಯವಿದ್ದಲ್ಲಿ ಮಾತ್ರ ಭೂ ವಿಜ್ಞಾನಿಗಳ ಸಲಹೆ ಮೇರೆಗೆ ಹೊಸ ಬೋರ್‍ವೆಲ್‍ಗಳನ್ನು ಕೊರೆಸಿ ಆ ಬೋರ್‍ವೆಲ್‍ಗಳು ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು.

        ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಮುನ್ನ ಅದರ ಸ್ಥಳ ಮತ್ತು ಗುರುತಿಗಾಗಿ ಜಿಪಿಎಸ್‍ಸಿಸ್ಟಮ್ ಮೂಲಕ ಅಧಿಕೃತ ದಾಖಲೆ ಮಾಡುವುದರೊಂದಿಗೆ ಅದರ ಛಾಯಾಚಿತ್ರವನ್ನು ಕಾಮಗಾರಿಗೆ ಮುನ್ನ ಹಾಗೂ ನಂತರ ತೆಗೆದು ಗಾಂಧಿ ಸಾಕ್ಷಿ ಕಾಯಕದಲ್ಲಿ ದಾಖಲಿಸಬೇಕು. ಕ್ರಿಯಾ ಯೋಜನೆಯನ್ನು ಆಯಾ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಟಾಸ್ಕ್ ಫೋರ್ಸ್ ನಿಯಾಮವಳಿ ಯಂತೆ ಅನುಮೋದಿಸಿದ್ದು,ಈಗ ಒದಗಿಸಿರುವ ಅನುದಾನದ ಮಿತಿಯೊಳಗೆ ತುರ್ತು ಕಾಮಗಾರಿಗಳನ್ನು ಸ್ಥಳೀಯ ಅಗತ್ಯತೆಗೆ ಆಧರಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ಅನುಷ್ಠಾನಗೊಳಿಸಬೇಕು ಎಂಬ ನಿಬಂಧನೆಗಳನ್ನು ವಿಧಿಸಿರುವ ರಾಜ್ಯ ಸರ್ಕಾರ, ನೀರಿನ ಅಭಾವ ನೀಗಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap