ವಾಹನ ಸಂಚಾರದ ಬಗ್ಗೆ ಎಚ್ಚರಿಕೆ ವಹಿಸಲು ವಿದ್ಯಾರ್ಥಿಗಳಿಗೆ ಕರೆ

ಗುಬ್ಬಿ

   ವಾಹನಗಳಲ್ಲಿ ಸಂಚರಿಸುವಾಗ ವಿದ್ಯಾರ್ಥಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಬಸ್‍ಗಳಿಗೆ ಹತ್ತುವಾಗ ಮತ್ತು ಇಳಿಯುವಾಗ ವಾಹನಗಳ ಚಾಲಕರು ಮತ್ತು ನಿರ್ವಾಹಕರು ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳವಂತೆ ಸಿಪಿಐ ದೀಪಕ್ ತಿಳಿಸಿದರು.

       ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಇದರಿಂದ ಸಾಕಷ್ಟು ಅವಘಡಗಳು ಉಂಟಾಗುತ್ತಿರುವುದರಿಂದ ವಾಹನಸವಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದರು.

      ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಬಳಸುವುದರ ಜೊತೆಗೆ ವಾಹನಗಳ ಇನ್ಸೂರೆನ್ಸ್ ಮತ್ತು ವಾಹನ ಪರವಾನಗಿಯನ್ನು ಹೊಂದಿರಬೇಕು. ವಿದ್ಯಾರ್ಥಿಗಳು ಮತ್ತು ಮಹಿಳೆಯರು ನಿಗದಿತ ಬಸ್‍ಗಳಲ್ಲಿ ಸಂಚಾರ ಮಾಡಬೇಕು. ಇದರಿಂದ ಸಂಭವಿಸುವ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಆಟೋ ಚಾಲಕರು, ಕಟ್ಟಡ ಕಾರ್ಮಿಕರು ಸುರಕ್ಷತೆ ಬಗ್ಗೆ ಅಗತ್ಯ ಎಚ್ಚರಿಕೆ ವಹಿಸುವಂತೆ ತಿಳಿಸಿದರು.

     ತಾಲ್ಲೂಕಿನಾದ್ಯಂತ ಹಲವು ಕಡೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ವಾಹನ ಚಾಲಕರು ಮತ್ತು ವಾಹನ ಸವಾರರು ಅಗತ್ಯ ಎಚ್ಚರಿಕೆ ವಹಿಸುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ಪಿಎಸ್‍ಐ ಹರೀಶ್, ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬಸವರಾಜು, ನಾರಾಯಣ್, ಶಂಕರೇಗೌಡ ಮುಂತಾದವರು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link