ರೊಟ್ಟಿ ಹಂಚಿದ ವಾಟಾಳ್ ಬಂಧನ…!?

ಬೆಳಗಾವಿ

          ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಸುವರ್ಣ ಸೌಧದ ಮುಂದೆ ರೊಟ್ಟಿ ಹಂಚುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

        ಸುವರ್ಣ ಸೌಧದ ಗೇಟ್ ಬಳಿ ರೊಟ್ಟಿ ಹಂಚಿ ವಿನೂತನ ಪ್ರತಿಭಟನೆ ನಡೆಸಲು ಮುಂದಾದ ವಾಟಾಳ್ ನಾಗಾರಾಜ್ ಅವರನ್ನು ಪೊಲೀಸರು ಬಂಧಿಸಿದರು.

        ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ದಿ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯುತ್ತಿಲ್ಲ. ಯಾರೂ ಸಹ ಪ್ರಮಾಣಿಕ ಪ್ರಯತ್ನ ನಡೆಸಿಲ್ಲ. ಬರೀ ಕಾಟಾಚಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಉತ್ತರ ಕರ್ನಾಟಕಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡಿಲ್ಲ. ಇದನ್ನು ಖಂಡಿಸಿ ಜನವರಿಯಲ್ಲಿ ಬೀದರನಿಂದ ಬೆಂಗಳೂರುವರೆಗೆ ಹೋರಾಟ ನಡೆಸುವುದಾಗಿ ವಾಟಾಳ್ ನಾಗಾರಾಜ್ ಎಚ್ಚರಿಕೆ ನೀಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap