ವೀರಣ್ಣನ ಗುಡಿಯಲ್ಲಿ ಜರುಗಿದ ಬೆಳ್ಳಿ ಪಲ್ಲಕಿ ಉತ್ಸವ

ಗುಬ್ಬಿ

     ತಾಲ್ಲೂಕಿನ ಇತಿಹಾಸ ಪ್ರಸಿದ್ದ ಸಿ.ಎಸ್.ಪುರ ಹೋಬಳಿ ವೀರಣ್ಣನಗುಡಿ ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಅತ್ಯಾಕರ್ಷಕವಾದ ಬೆಳ್ಳಿಪಲ್ಲಕಿ ಉತ್ಸವವು ಸಹಸ್ರಾರು ಸಂಖ್ಯೆಯ ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು.

     ವರ್ಷಕ್ಕೊಮ್ಮೆ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ಅತ್ಯಾಕರ್ಷಕವಾದ ಬೆಳ್ಳಿಪಲ್ಲಕಿ ಉತ್ಸವವನ್ನು ಕಣ್ತುಂಬಿಕೊಳ್ಳಲು ನಾಡಿನ ವಿವಿಧ ಭಾಗಗಳಿಂದ ಮತ್ತು ತಾಲ್ಲೂಕಿನ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಬೆಳ್ಳಿಪಲ್ಲಕ್ಕಿ ಉತ್ಸವದ ಅಂಗವಾಗಿ ದೇವಾಲಯದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು.

    ಜಾತ್ರಾ ಮಹೋತ್ಸವದ ಅಂಗವಾಗಿ ಪ್ರತಿನಿತ್ಯ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆಯುತ್ತಿದ್ದು, ಪ್ರತಿ ದಿನ ರಾತ್ರಿ ಭಕ್ತಾದಿಗಳಿಂದ ವಿವಿಧ ಉತ್ಸವಗಳು ನಡೆಯುತ್ತಿವೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಇಷ್ಟಾರ್ಥ ಪೂಜೆಗಳನ್ನು ಸಲ್ಲಿಸುತ್ತಿದ್ದಾರೆ. ಬೆಳ್ಳಿ ಪಲ್ಲಕಿ ಅಂಗವಾಗಿ ಬೆಳಗ್ಗೆಯಿಂದಲೆ ದೇವಾಲಯದಲ್ಲಿ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಪ್ರತಿ ವರ್ಷದಂತೆ ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿಯವರಿಗೆ ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತಾದಿಗಳು ತಮ್ಮ ಇಷ್ಟಾರ್ಥ ಪೂಜಾ ಕೈಂಕರ್ಯಗಳನ್ನು ಸಲ್ಲಿಸಿದರು.

      ಶ್ರೀಭದ್ರಕಾಳಿ ಸಮೇತ ವೀರಭದ್ರಸ್ವಾಮಿ ಬೆಳ್ಳಿಪಲ್ಲಕಿ ಉತ್ಸವದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು. ಬೆಳ್ಳಿಪಲ್ಲಕಿಯನ್ನು ವಿವಿಧ ಹೂಗಳಿಂದ ಮತ್ತು ವಿದ್ಯುತ್ ದೀಪಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ ನಡೆಸಿ ಉತ್ಸವಮೂರ್ತಿಯನ್ನು ಅತ್ಯಾಕರ್ಷಕವಾಗಿ ಅಲಂಕರಿಸಿದ್ದ ಬೆಳ್ಳಿ ಪಲ್ಲಕಿಯಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಲಿಂಗವೀರರ ಕುಣಿತ, ವೀರಗಾಸೆ, ಧ್ವಜಕುಣಿತ, ನಾದಸ್ವರ ಸೇರಿದಂತೆ ವಿವಿಧ ಜನಪದ ಪ್ರಕಾರಗಳ ನೃತ್ಯಗಳನ್ನು ಏರ್ಪಡಿಸಲಾಗಿತ್ತು.

      ಬೆಳ್ಳಿಪಲ್ಲಕಿ ಉತ್ಸವದಲ್ಲಿ ದೇವಾಲಯದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ವಿ.ಪುಟ್ಟಸ್ವಾಮಿ, ಕಾರ್ಯಾಧ್ಯಕ್ಷ ಎಂ.ವಿ.ಬಸವರಾಜು, ಕಾರ್ಯದರ್ಶಿ ಟಿ.ಎನ್.ಶಿವರುದ್ರಯ್ಯ, ಖಜಾಂಚಿ ನಂಜುಂಡಪ್ಪ, ಅರ್ಚಕ ಶ್ರೀಧರದೀಕ್ಷಿತ್ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap