ತುಮಕೂರು

ಎಂ.ಬಿ.ಎ. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ನಂತರ ಧೈರ್ಯ, ಆತ್ಮವಿಶ್ವಾಸ ಹಾಗೂ ಸಹಾನುಭೂತಿ ಗುಣಗಳನ್ನು ಬೆಳೆಸಿಕೊಂಡು ಉತ್ತಮ ನಾಯಕರಾಗಿ ತಾವು ಆರಿಸಿಕೊಂಡ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕೆಂದು ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಡಾ.ಜಿ.ಕಲ್ಪನ ಅಭಿಪ್ರಾಯಪಟ್ಟರು.
ಅವರು ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ ಆಯೋಜಿಸಲಾಗಿದ್ದ ಅಶ್ವಮೇಧ 2ಕೆ19 ರಾಷ್ಟ್ರಮಟ್ಟದ ಮ್ಯಾನೇಜ್ಮೆಂಟ್ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ನಂತರ ನೌಕರಿಗೆ ಆಸೆ ಪಡದೆ ಸ್ವಯಂ ಉದ್ಯೋಗಿಗಳಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಬೇಕೆಂದು ಕರೆ ನೀಡಿದ ಅವರು, ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಜಾನ್ ಎಫ್ ಕೆನಡಿ ಇವರಂಥ ಉತ್ತಮ ನಾಯಕರಾಗಬೇಕೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದನ್ ನೆಂಪೆ ಮಾತನಾಡಿ ನಮ್ಮ ದೇಶವನ್ನು ಪ್ರೀತಿಸುವಂತಹ ಗುಣ ನಮ್ಮಲ್ಲಿರಬೇಕು ಹಾಗೂ ಜೀವನದಲ್ಲಿ ತಮ್ಮಲ್ಲಿ ಹುದುಗಿರುವ ಸೃಜನಶೀಲತೆ ಉಪಯೋಗಿಸಿಕೊಂಡು ಏನನ್ನಾದರೂ ಸಾಧಿಸಬೇಕು ಎಂದರು. ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ ಅಧ್ಯಕ್ಷೀಯ ಭಾಷಣ ಮಾಡಿ ವಿದ್ಯಾರ್ಥಿಗಳಲ್ಲಿ ತಾವು ಆರಿಸಿಕೊಂಡ ಕ್ಷೇತ್ರದಲ್ಲಿ ಉನ್ನತಿ ಸಾಧಿಸಬೇಕು ಎಂದರು.
ಸಂಯೋಜಕಿ ಪುಷ್ಪಲತಾ ಪಾಟೀಲ್, ಕು.ಮೋನಿಷಾ ಹಾಗೂ ಪೂಜಾ ಪಿ.ಮೂರ್ತಿ ಪ್ರಾರ್ಥಿಸಿದರು. ಡಾ.ಎಂ.ಆರ್.ಸೊಲ್ಲಾಪುರ, ಸ್ವಾಗತಿಸಿದರು. ಅಮಿತಾ ಜಿ. ಮತ್ತು ಮಹಮ್ಮದ್ ಪುರ್ಖಾನ್ ನಿರೂಪಿಸಿದರು. ಪ್ರೊ.ಗಿರೀಶ್ ವೈ.ಎಂ. ವಂದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
