ವಿಜೃಂಭಿಸಿದ ವೀರಭದ್ರಸ್ವಾಮಿ ದೊಡ್ಡ ರಥೋತ್ಸವ

ಹಿರಿಯೂರು :

    ತಾಲ್ಲೂಕಿನ ಹರ್ತಿಕೋಟೆ ಗ್ರಾಮದಲ್ಲಿ ಶ್ರೀವೀರಭದ್ರಸ್ವಾಮಿಯ ಬ್ರಹ್ಮ ರಥೋತ್ಸವ ಸಾವಿರಾರು ಜನ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ನೆರವೇರಿತು.

    ಸ್ವಾಮಿಯ ರಥವನ್ನು ವಿವಿಧ ಹೂವುಗಳಿಂದ ಕಣ್ಮನ ಸೆಳೆಯುವಂತೆ ಅಲಂಕರಿಸಲಾಗಿತ್ತು. ಭಕ್ತರು ಚೂರುಬೆಲ್ಲ ಮೆಣಸು ರಥಕ್ಕೆ ಸಮರ್ಪಿಸಿ ತಮ್ಮ ಇಷ್ಟಾರ್ಥ ನೆರವೇರಿಸಿಕೊಂಡರು ಕೊಬ್ಬರಿ ಆರತಿ ನಡೆಸಿದರು. ಹಿರಿಯರು ಮಹಿಳೆಯರು ಮಕ್ಕಳು ಎನ್ನದೇ ಗ್ರಾಮಸ್ಥರು ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ನಾಡಿನ ಅನೇಕ ಕಡೆಗಳಿಂದ ಬಂದ ಸ್ವಾಮಿಯ ಭಕ್ತರು ಪಾಲ್ಗೊಂಡಿದ್ದರು. ರಥೋತ್ಸವಕ್ಕೆ ಬಂದಿದ್ದ ಭಕ್ತರಿಗೆ ಕೋಸುಂಬರಿ ಪಾನಕ ವಿತರಣೆ ನಡೆಯಿತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link